• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಿಎಸ್ಟಿ ಮೂಲಕ ಸಣ್ಣ ಉದ್ದಿಮೆದಾರರಿಗೆ ಸಿಹಿ ಸುದ್ದಿ ನೀಡಲಿದ್ದಾರೆಯೇ ಮೋದಿ?

TNN Correspondent Posted On November 5, 2017
0


0
Shares
  • Share On Facebook
  • Tweet It

ದೆಹಲಿ: ಜಿಎಸ್ಟಿ ಜಾರಿಯಿಂದ ಉದ್ಯಮಿಗಳು, ಅದರಲ್ಲೂ ಸಣ್ಣ ಉದ್ದಿಮೆದಾರರಿಗೆ ಹೊಡೆತ ಬಿದ್ದಿದೆ ಎಂಬ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್ಟಿಯಿಂದ ಸಣ್ಣ ಉದ್ದಿಮೆದಾರರಿಗೆ ರಿಯಾಯಿತಿ, ತೆರಿಗೆ ದರ ಕಡಿತ ಅಥವಾ ವಿನಾಯಿತಿ ಕೊಡುವ ಮುನ್ಸೂಚನೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋದಿ, ಎಲ್ಲ ರಾಜ್ಯಗಳಿಂದ ದೂರು ಬಂದಿವೆ. ಅದರಲ್ಲಿ ರಾಜ್ಯ ಸಚಿವರೇ ಈ ಕುರಿತು ದೂರಿದ್ದಾರೆ. ಹಾಗಾಗಿ ಕೆಲವು ಮಾರ್ಪಾಡು ಮಾಡಲು ಸಹ ಜಿಎಸ್ಟಿ ಸಮಿತಿ ಒಪ್ಪಿಗೆ ಸೂಚಿಸಿದೆ ಎಂದು ಹೇಳಿರುವುದು ಹೊಸ ಘೋಷಣೆಯ ಸೂಚನೆ ಸಿಕ್ಕಿದ್ದು, ಇದರಿಂದ ಸಣ್ಣ ಉದ್ದಿಮೆದಾರರಿಗೆ ಅನುಕೂಲವಾಗಿದೆ ಎಂಬ ಮಾತು ಕೇಳಿಬರುತ್ತಿವೆ.

ಜಿಎಸ್ಟಿ ಜಾರಿ ಬಳಿಕ ದೇಶಾದ್ಯಂತ ಸಣ್ಣ ಉದ್ದಿಮೆದಾರರಿಗೆ ಕಚ್ಚಾ ವಸ್ತುಗಳ ಖರೀದಿ, ಉತ್ಪಾದನಾ ವೆಚ್ಚ, ತೆರಿಗೆ ದರದ ಹೊಡೆತ ಸೇರಿ ಹಲವು ಸಮಸ್ಯೆಗಳಾಗುತ್ತಿವೆ ಎಂಬ ಆರೋಪ ಕೇಳಿಬಂದಿದ್ದವು. ಇದನ್ನೇ ಮೋದಿ ವಿರುದ್ಧ ಅಸ್ತ್ರವನ್ನಾಗಿಯೂ ಕೆಲವು ರಾಜಕೀಯ ಪಕ್ಷಗಳು ಕೇಳಿಸಿಕೊಂಡಿದ್ದವು. ಆದರೆ ಮೋದಿ ಅವರೆಲ್ಲರ ಬಾಯಿ ಮುಚ್ಚಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಅವರ ಮಾತಿನಿಂದ ಸ್ಪಷ್ಟವಾಗಿದೆ.

ನ.9 ಹಾಗೂ 10ರಂದು ಸರಕು ಮತ್ತು ಸೇವಾ ತೆರಿಗೆ ಸಮಿತಿ ಅಧ್ಯಕ್ಷ ಅರುಣ್ ಜೇಟ್ಲಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಈ ಕುರಿತು ತೀರ್ಮಾನ ಹೊರಬೀಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search