• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಿಎಸ್ಟಿ ಮೂಲಕ ಸಣ್ಣ ಉದ್ದಿಮೆದಾರರಿಗೆ ಸಿಹಿ ಸುದ್ದಿ ನೀಡಲಿದ್ದಾರೆಯೇ ಮೋದಿ?

TNN Correspondent Posted On November 5, 2017


  • Share On Facebook
  • Tweet It

ದೆಹಲಿ: ಜಿಎಸ್ಟಿ ಜಾರಿಯಿಂದ ಉದ್ಯಮಿಗಳು, ಅದರಲ್ಲೂ ಸಣ್ಣ ಉದ್ದಿಮೆದಾರರಿಗೆ ಹೊಡೆತ ಬಿದ್ದಿದೆ ಎಂಬ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್ಟಿಯಿಂದ ಸಣ್ಣ ಉದ್ದಿಮೆದಾರರಿಗೆ ರಿಯಾಯಿತಿ, ತೆರಿಗೆ ದರ ಕಡಿತ ಅಥವಾ ವಿನಾಯಿತಿ ಕೊಡುವ ಮುನ್ಸೂಚನೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋದಿ, ಎಲ್ಲ ರಾಜ್ಯಗಳಿಂದ ದೂರು ಬಂದಿವೆ. ಅದರಲ್ಲಿ ರಾಜ್ಯ ಸಚಿವರೇ ಈ ಕುರಿತು ದೂರಿದ್ದಾರೆ. ಹಾಗಾಗಿ ಕೆಲವು ಮಾರ್ಪಾಡು ಮಾಡಲು ಸಹ ಜಿಎಸ್ಟಿ ಸಮಿತಿ ಒಪ್ಪಿಗೆ ಸೂಚಿಸಿದೆ ಎಂದು ಹೇಳಿರುವುದು ಹೊಸ ಘೋಷಣೆಯ ಸೂಚನೆ ಸಿಕ್ಕಿದ್ದು, ಇದರಿಂದ ಸಣ್ಣ ಉದ್ದಿಮೆದಾರರಿಗೆ ಅನುಕೂಲವಾಗಿದೆ ಎಂಬ ಮಾತು ಕೇಳಿಬರುತ್ತಿವೆ.

ಜಿಎಸ್ಟಿ ಜಾರಿ ಬಳಿಕ ದೇಶಾದ್ಯಂತ ಸಣ್ಣ ಉದ್ದಿಮೆದಾರರಿಗೆ ಕಚ್ಚಾ ವಸ್ತುಗಳ ಖರೀದಿ, ಉತ್ಪಾದನಾ ವೆಚ್ಚ, ತೆರಿಗೆ ದರದ ಹೊಡೆತ ಸೇರಿ ಹಲವು ಸಮಸ್ಯೆಗಳಾಗುತ್ತಿವೆ ಎಂಬ ಆರೋಪ ಕೇಳಿಬಂದಿದ್ದವು. ಇದನ್ನೇ ಮೋದಿ ವಿರುದ್ಧ ಅಸ್ತ್ರವನ್ನಾಗಿಯೂ ಕೆಲವು ರಾಜಕೀಯ ಪಕ್ಷಗಳು ಕೇಳಿಸಿಕೊಂಡಿದ್ದವು. ಆದರೆ ಮೋದಿ ಅವರೆಲ್ಲರ ಬಾಯಿ ಮುಚ್ಚಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಅವರ ಮಾತಿನಿಂದ ಸ್ಪಷ್ಟವಾಗಿದೆ.

ನ.9 ಹಾಗೂ 10ರಂದು ಸರಕು ಮತ್ತು ಸೇವಾ ತೆರಿಗೆ ಸಮಿತಿ ಅಧ್ಯಕ್ಷ ಅರುಣ್ ಜೇಟ್ಲಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಈ ಕುರಿತು ತೀರ್ಮಾನ ಹೊರಬೀಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search