• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೋಟು ನಿಷೇಧದ ಬಳಿಕ ನಕಲಿ ಕಂಪನಿಗಳಿಂದ 17 ಸಾವಿರ ಕೋಟಿ ರು. ವಹಿವಾಟು

TNN Correspondent Posted On November 6, 2017
0


0
Shares
  • Share On Facebook
  • Tweet It

ದೆಹಲಿ: ನೋಟು ನಿಷೇಧದ ಬಳಿಕ ಕೇಂದ್ರ ಸರ್ಕಾರ ಕೈಗೊಂಡ ಕಪ್ಪು ಹಣದ ವಿರುದ್ಧದ ಕಾರ್ಯಾಚರಣೆ ಫಲ ನೀಡುತ್ತಿದ್ದು, ನೋಟು ನಿಷೇಧದ ಬಳಿಕ 2.24 ನಕಲಿ ಕಂಪನಿಗಳಿರುವ ಕುರಿತು ಪರಿಶೀಲನೆ ನಡೆಸಲಾಗಿದ್ದು, ಅವುಗಳಲ್ಲಿ 35 ಸಾವಿರ ನಕಲಿ ಕಂಪನಿಗಳಿಂದ 17 ಸಾವಿರ ಕೋಟಿ ರು. ವಹಿವಾಟು ನಡೆಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ಮಾಹಿತಿ ನೀಡಿದೆ.

ನೋಟು ನಿಷೇಧದ ಬಳಿಕ ಮೊದಲ ಹಂತವಾಗಿ 56 ಬ್ಯಾಂಕುಗಳು ಶಂಕಿತ ನಕಲಿ ಕಂಪನಿಗಳ ವಹಿವಾಟು ಮಾಹಿತಿ ನೀಡಿದ್ದು, ಸುಮಾರು 35 ಸಾವಿರ ಕಂಪನಿಗಳು 58 ಸಾವಿರ ಖಾತೆಗಳ ಮೂಲಕ 17 ಸಾವಿರ ಕೋಟಿ ರು. ಠೇವಣಿ ಹಾಗೂ ವಿತ್ ಡ್ರಾ ಮಾಡಿವೆ ಎಂದು ತಿಳಿಸಿದೆ.

ಇವುಗಳಲ್ಲಿ ಒಂದೇ ಕಂಪನಿ ನ.8, 2016ಕ್ಕೂ ಮೊದಲು ಯಾವುದೇ ವಹಿವಾಟು ಹೊಂದಿರಲಿಲ್ಲ. ಆದರೆ ನೋಟ್ ಬ್ಯಾನ್ ಬಳಿಕ 2,134 ಖಾತೆಗಳ ಮೂಲಕ 2,484 ಕೋಟಿ ರು. ವಹಿವಾಟು ನಡೆಸಿದೆ ಎಂದು ವಿವರಿಸಿದೆ.

2013ರ ಕಂಪನಿಗಳ ಕಾಯಿದೆ ಪ್ರಕಾರ ಈ ನಕಲಿ ಕಂಪನಿಗಳ ವಿರುದ್ಧ ಸೂಕ್ರ ಕೈಗೊಳ್ಳಲಾಗುತ್ತದೆ. ಮತ್ತಷ್ಟು ತನಿಖೆ ನಡೆಸಿ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಈಗಾಗಲೇ ಸರ್ಕಾರ 2 ಲಕ್ಷ ನಿಷ್ಕ್ರಿಯಗೊಂಡಿರುವ ಹಾಗೂ ಸರ್ಕಾರಕ್ಕೆ ಸಮರ್ಪಕ ಮಾಹಿತಿ ಒದಗಿಸದಿರುವ ಕಂಪನಿಗಳ ನೋಂದಣಿ ರದ್ದುಗೊಳಿಸಿದೆ.

ನೋಟು ನಿಷೇಧದ ಬಳಿಕ ಕೇಂದ್ರ ಸರ್ಕಾರ ಕಪ್ಪು ಹಣದ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ, ನೋಟು ನಿಷೇಧ ವಿಫಲ ಎಂದು ಘೀಳಿಡುವವರಿಗೆ ಸರ್ಕಾರದ ಈ ಕ್ರಮವೇ ಉತ್ತರವಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!

  • Privacy Policy
  • Contact
© Tulunadu Infomedia.

Press enter/return to begin your search