• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್: ಮೋದಿ ವಾಗ್ದಾಳಿ

TNN Correspondent Posted On November 6, 2017
0


0
Shares
  • Share On Facebook
  • Tweet It

ಶಿಮ್ಲಾ: ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್, ಅದರ ಗುರುತೇ ಭ್ರಷ್ಟಾಚಾರ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಪ್ರಚಾರ ರ್ಯಾಲಿ ನಡೆಸಿದ ಅವರು, ಕಾಂಗ್ರೆಸ್ಸಿನ ಭ್ರಷ್ಟಾಚಾರಕ್ಕೆ ಜನ ಬೇಸತ್ತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಜನರೇ ಸಿಡಿದೆದ್ದಿದ್ದು, ಈಗಾಗಲೇ ಯುದ್ಧ ಕಣದಿಂದ ಕಾಂಗ್ರೆಸ್ ಹಿಂದೆ ಸರಿದಿದೆ ಎಂದು ಜರಿದಿದ್ದಾರೆ.

ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಜನರ ಮನಸ್ಥಿತಿ, ಅಭಿಪ್ರಾಯ, ಒತ್ತಾಸೆ ಏನಿದೆ ಎಂಬುದು ಗೊತ್ತು. ಗಾಳಿ ಯಾವ ಕಡೆ, ಯಾರ ಕಡೆ ಬೀಸುತ್ತದೆ ಎಂಬುದು ಗೊತ್ತಾಗುತ್ತದೆ. ಆದರೆ ಈ ಬಾರಿಯ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿರುಗಾಳಿಯೇ ಇದೆ ಎಂದು ಮೋದಿ ಹೇಳಿದ್ದಾರೆ.

ಇದುವರೆಗೂ ಹಿಮಾಚಲ ಪ್ರದೇಶದಲ್ಲಿ ಏಕಾಭಿಮುಖವಾಗಿ ಚುನಾವಣೆ ನಡೆದಿಲ್ಲ. ಆದರೆ ಕಾಂಗ್ರೆಸ್ ದುರಾಡಳಿತದಿಂದ ಬೇಸತ್ತಿರುವ ಜನ ಬಿಜೆಪಿಯನ್ನು ಏಕಾಭಿಮುಖವಾಗಿ ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜೀವ್ ಗಾಂಧಿ ವಿರುದ್ಧವೂ ಟೀಕೆ

ನರೇಂದ್ರ ಮೋದಿ ಅವರು ರಾಜೀವ್ ಗಾಂಧಿ ಅವರನ್ನೂ ಟೀಕಿಸಿದ್ದಾರೆ. ಸರ್ಕಾರದ ಅನುದಾನದ ಒಂದು ರುಪಾಯಿಯಲ್ಲಿ ಕೇವಲ 15 ಪೈಸೆ ಮಾತ್ರ ಜನರಿಗೆ ತಲುಪುತ್ತದೆ ಎಂಬ ರಾಜೀವ್ ಹೇಳಿಕೆ ಟೀಕಿಸಿದ ಮೋದಿ, “ಕಾಂಗ್ರೆಸ್ ಆಡಳಿತಾವಧಿಯಲ್ಲಿ ಯಾವ ಪರಿ ಭ್ರಷ್ಟಾಚಾರ ಎಸಗಿದೆ ಎಂಬುದನ್ನೇ ರಾಜೀವ್ ಗಾಂಧಿ ಹೇಳಿದ್ದಾರೆ. ರಾಜೀವ್ ಭ್ರಷ್ಟಾಚಾರದ ಬಗ್ಗೆ ಪ್ರಶ್ನೆ ಎತ್ತಿದರಾದರೂ, ಪರಿಹಾರ ಕಂಡುಕೊಳ್ಳಲಿಲ್ಲ. ಅವರೇ ಹೇಳಿದಂತೆ, 85 ಪೈಸೆ ಎಲ್ಲಿ ಹೋಗುತ್ತಿತ್ತು” ಎಂದು ಪ್ರಶ್ನಿಸಿದರು.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • 2
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 3
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 4
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search