• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಲೇರಿಯಾದಲ್ಲಿ ರಾಜ್ಯಕ್ಕೆ ದ.ಕ ಪ್ರಥಮ:- ಯಾಕೆ ಹೀಗಾಯ್ತು ಗೊತ್ತಾ?

TNN Correspondent Posted On June 30, 2017
0


0
Shares
  • Share On Facebook
  • Tweet It

ಕರಾವಳಿಯಲ್ಲಿ  ಇತ್ತೀಚಿನ ವರ್ಷಗಳಲ್ಲಿ  ಹೆಚ್ಚಿನ ಮಲೇರಿಯಾ,  ಡೆಂಗ್ಯೂ ಪ್ರಕರಣಳು ಕಾಣಿಸಿಕೊಳ್ಳುತ್ತಿವೆ.ಅದರಲ್ಲೂ  ಅಭಿವೃದ್ಧಿ, ವ್ಯವಹಾರ, ಶಿಕ್ಷಣ, ಉದ್ಯಮ ಸೇರಿದಂತೆ ಪ್ರತಿಯೊಂದರಲ್ಲೂ  ರಾಜ್ಯದಲ್ಲಿ ಮುಂಚೂಣಿಯಲ್ಲಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮಲೇರಿಯಾದಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಉಡುಪಿ ದ್ವಿತೀಯ ಸ್ಥಾನದಲ್ಲಿದ್ದು, ಡೆಂಗ್ಯೂನಲ್ಲಿ ಮೈಸೂರು ಪ್ರಥಮ ಸ್ಥಾನ ಉಡುಪಿ ದ್ವಿತೀಯ ಸ್ಥಾನ ಪಡೆದಿದೆ.  ಈ ನಿಟ್ಟಿನಲ್ಲಿ  ಸಂಪೂರ್ಣ  ನಿಯಂತ್ರಣಕ್ಕೆ ರಾಜ್ಯ ಆರೋಗ್ಯ ಇಲಾಖೆ ಮಲೇರಿಯಾ ಮುಕ್ತ ಕರಾವಳಿಗೆ ಹೆಚ್ಚಿನ ಒತ್ತು ನೀಡಿ ಕಾರ್ಯ ನಿರ್ವಹಿಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದ.ಕ ಜಿಲ್ಲೆಯಲ್ಲಿ ಮಲೇರಿಯಾ ಸಂಪೂರ್ಣ ಹತೋಟಿಗೆ ತಂದರೆ ಮಾತ್ರ 2022 ರಲ್ಲಿ ರಾಜ್ಯವನ್ನು ಮಲೇರಿಯಾ ಮುಕ್ತಗೊಳಿಸಲು ಸಾಧ್ಯವಿದೆ ಎಂಬುದು ಅಧಿಕಾರಿಗಳ ಅಭಿಪ್ರಾಯ. ಮಂಗಳೂರು ನಗರದಲ್ಲಿ ವಿಶೇಷವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮಲೇರಿಯಾ ಮುಕ್ತ ನಗರ ನಿರ್ಮಾಣ ಉದ್ದೇಶದಿಂದ ಕಾರ್ಯಾಚರಿಸಲು ಜಿಲ್ಲಾ ಆರೋಗ್ಯಾಧಿಕಾರಿ, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಸರಕಾರಿ ವೈದ್ಯರು, ಮಹಾನಗರಪಾಲಿಕೆ ಅಧಿಕಾರಿಗಳು, ಮೆಡಿಕಲ್‌ ಕಾಲೇಜು, ನರ್ಸಿಂಗ್ವಿದ್ಯಾರ್ಥಿಗಳು, ಅನ್ಯ ಜಿಲ್ಲೆಗಳ ಸಿಬ್ಬಂದಿಗಳನ್ನು ತೊಡಗಿಸಿಕೊಳ್ಳಲಾಗಿದೆ. ಮಲೇರಿಯಾಕ್ಕೆ ರೋಗದ ಅನಾಫಿಲಿಸ್‌ ಸೊಳ್ಳೆ ಉತ್ಪತ್ತಿಯಾಗುವುದೇತಿಳಿ ನೀರಿನಲ್ಲಿ. ಮಾಹಿತಿ ಪ್ರಕಾರ ಮಂಗಳೂರಿನಲ್ಲಿ  ಸುಮಾರು 11 ಸಾವಿರ ಬಾವಿ, ಕೆರೆಗಳಿದ್ದು, ಇವುಗಳಿಗೆ ಪ್ರತಿಯೊಂದಕ್ಕೆ ಕನಿಷ್ಠ 100 ರಿಂದ 150 ಗಪ್ಪಿ ಮೀನು ಹಾಕುವ ಉದ್ದೇಶ ಹೊಂದಲಾಗಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಚಿಕೂನ್ಗುನ್ಯಾ, ಆನೆಕಾಲು, ಮೆದುಳು ಜ್ವರದ ಪ್ರಮಾಣಕಡಿಮೆಯಾಗುತ್ತಿದೆ. ಸ್ವಯಂ ಜಾಗೃತಿ ಹಾಗೂ ಮುನ್ನೆಚ್ಚರಿಕೆಯಿಂದ ಮಳೆಗಾಲದಲ್ಲಿ ಬರುವ ಕಾಯಿಲೆ ತಡೆಗಟ್ಟಲುಸಾಧ್ಯ. ಮನೆಯ ಆವರಣದಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರ ವಹಿಸಬೇಕು. ಜ್ವರ ಅಥವಾ ಯಾವುದೇ ರೀತಿಯ ರೋಗದ ಲಕ್ಷಣ ಕಂಡುಬಂದರೆ ಶೀಘ್ರ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ರಕ್ತ ಪರೀಕ್ಷೆಮಾಡಿ ನೀರಿನ ಮಿತ, ಸಮರ್ಪಕ ಬಳಕೆ ಜತೆಗೆ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ.

ವಿ.ಕೆ ಕಡಬ

 

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search