• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಲೇರಿಯಾದಲ್ಲಿ ರಾಜ್ಯಕ್ಕೆ ದ.ಕ ಪ್ರಥಮ:- ಯಾಕೆ ಹೀಗಾಯ್ತು ಗೊತ್ತಾ?

TNN Correspondent Posted On June 30, 2017
0


0
Shares
  • Share On Facebook
  • Tweet It

ಕರಾವಳಿಯಲ್ಲಿ  ಇತ್ತೀಚಿನ ವರ್ಷಗಳಲ್ಲಿ  ಹೆಚ್ಚಿನ ಮಲೇರಿಯಾ,  ಡೆಂಗ್ಯೂ ಪ್ರಕರಣಳು ಕಾಣಿಸಿಕೊಳ್ಳುತ್ತಿವೆ.ಅದರಲ್ಲೂ  ಅಭಿವೃದ್ಧಿ, ವ್ಯವಹಾರ, ಶಿಕ್ಷಣ, ಉದ್ಯಮ ಸೇರಿದಂತೆ ಪ್ರತಿಯೊಂದರಲ್ಲೂ  ರಾಜ್ಯದಲ್ಲಿ ಮುಂಚೂಣಿಯಲ್ಲಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮಲೇರಿಯಾದಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಉಡುಪಿ ದ್ವಿತೀಯ ಸ್ಥಾನದಲ್ಲಿದ್ದು, ಡೆಂಗ್ಯೂನಲ್ಲಿ ಮೈಸೂರು ಪ್ರಥಮ ಸ್ಥಾನ ಉಡುಪಿ ದ್ವಿತೀಯ ಸ್ಥಾನ ಪಡೆದಿದೆ.  ಈ ನಿಟ್ಟಿನಲ್ಲಿ  ಸಂಪೂರ್ಣ  ನಿಯಂತ್ರಣಕ್ಕೆ ರಾಜ್ಯ ಆರೋಗ್ಯ ಇಲಾಖೆ ಮಲೇರಿಯಾ ಮುಕ್ತ ಕರಾವಳಿಗೆ ಹೆಚ್ಚಿನ ಒತ್ತು ನೀಡಿ ಕಾರ್ಯ ನಿರ್ವಹಿಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದ.ಕ ಜಿಲ್ಲೆಯಲ್ಲಿ ಮಲೇರಿಯಾ ಸಂಪೂರ್ಣ ಹತೋಟಿಗೆ ತಂದರೆ ಮಾತ್ರ 2022 ರಲ್ಲಿ ರಾಜ್ಯವನ್ನು ಮಲೇರಿಯಾ ಮುಕ್ತಗೊಳಿಸಲು ಸಾಧ್ಯವಿದೆ ಎಂಬುದು ಅಧಿಕಾರಿಗಳ ಅಭಿಪ್ರಾಯ. ಮಂಗಳೂರು ನಗರದಲ್ಲಿ ವಿಶೇಷವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮಲೇರಿಯಾ ಮುಕ್ತ ನಗರ ನಿರ್ಮಾಣ ಉದ್ದೇಶದಿಂದ ಕಾರ್ಯಾಚರಿಸಲು ಜಿಲ್ಲಾ ಆರೋಗ್ಯಾಧಿಕಾರಿ, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಸರಕಾರಿ ವೈದ್ಯರು, ಮಹಾನಗರಪಾಲಿಕೆ ಅಧಿಕಾರಿಗಳು, ಮೆಡಿಕಲ್‌ ಕಾಲೇಜು, ನರ್ಸಿಂಗ್ವಿದ್ಯಾರ್ಥಿಗಳು, ಅನ್ಯ ಜಿಲ್ಲೆಗಳ ಸಿಬ್ಬಂದಿಗಳನ್ನು ತೊಡಗಿಸಿಕೊಳ್ಳಲಾಗಿದೆ. ಮಲೇರಿಯಾಕ್ಕೆ ರೋಗದ ಅನಾಫಿಲಿಸ್‌ ಸೊಳ್ಳೆ ಉತ್ಪತ್ತಿಯಾಗುವುದೇತಿಳಿ ನೀರಿನಲ್ಲಿ. ಮಾಹಿತಿ ಪ್ರಕಾರ ಮಂಗಳೂರಿನಲ್ಲಿ  ಸುಮಾರು 11 ಸಾವಿರ ಬಾವಿ, ಕೆರೆಗಳಿದ್ದು, ಇವುಗಳಿಗೆ ಪ್ರತಿಯೊಂದಕ್ಕೆ ಕನಿಷ್ಠ 100 ರಿಂದ 150 ಗಪ್ಪಿ ಮೀನು ಹಾಕುವ ಉದ್ದೇಶ ಹೊಂದಲಾಗಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಚಿಕೂನ್ಗುನ್ಯಾ, ಆನೆಕಾಲು, ಮೆದುಳು ಜ್ವರದ ಪ್ರಮಾಣಕಡಿಮೆಯಾಗುತ್ತಿದೆ. ಸ್ವಯಂ ಜಾಗೃತಿ ಹಾಗೂ ಮುನ್ನೆಚ್ಚರಿಕೆಯಿಂದ ಮಳೆಗಾಲದಲ್ಲಿ ಬರುವ ಕಾಯಿಲೆ ತಡೆಗಟ್ಟಲುಸಾಧ್ಯ. ಮನೆಯ ಆವರಣದಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರ ವಹಿಸಬೇಕು. ಜ್ವರ ಅಥವಾ ಯಾವುದೇ ರೀತಿಯ ರೋಗದ ಲಕ್ಷಣ ಕಂಡುಬಂದರೆ ಶೀಘ್ರ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ರಕ್ತ ಪರೀಕ್ಷೆಮಾಡಿ ನೀರಿನ ಮಿತ, ಸಮರ್ಪಕ ಬಳಕೆ ಜತೆಗೆ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ.

ವಿ.ಕೆ ಕಡಬ

 

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search