• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಜನನಿಬಿಡ ರಸ್ತೆಯನ್ನು ಬ್ಲಾಕ್ ಮಾಡಿ ಕಾರ್ಯಕ್ರಮ ಮಾಡಿದ ಮಂಗಳೂರು ಕಾಂಗ್ರೆಸ್!

Tulunadu News Posted On November 6, 2017
0


0
Shares
  • Share On Facebook
  • Tweet It

ಮಂಗಳೂರನ್ನು ಕಾಂಗ್ರೆಸ್ಸಿಗರು ತಮ್ಮ ಪಕ್ಷದ ಆಸ್ತಿಯೆಂದು ತಿಳಿದುಕೊಂಡಿದ್ದಾರೆ. ಅದಕ್ಕಾಗಿ ತಮಗೆ ಎಲ್ಲಿ ಮನಸ್ಸಾಗುತ್ತೋ ಅಲ್ಲಿ ಕುರ್ಚಿ, ಸ್ಟೇಜ್ ಹಾಕಿ ಕಾರ್ಯಕ್ರಮ ಮಾಡುತ್ತಾರೆ. ಅದಕ್ಕೆ ಇವತ್ತು ಸಾಕ್ಷಿಯಾದದ್ದು ಮಂಗಳೂರಿನ ಜನನಿಬಿಡ ಪ್ರದೇಶ ಮಲ್ಲಿಕಟ್ಟೆ.
ಜಿಲ್ಲಾ ಕಾಂಗ್ರೆಸ್ ಕಚೇರಿ ಇರುವ ರಸ್ತೆ ಎನ್ನುವ ತಪ್ಪಿಗೆ ಸೋಮವಾರ ಆ ರಸ್ತೆಯಲ್ಲಿ ಸಂಚರಿಸುವ ವಾಹನಗಳು, ಪ್ರಯಾಣಿಕರು ತೊಂದರೆ ಅನುಭವಿಸಿದರು. ರಸ್ತೆಯನ್ನು ಒಂದು ಕಡೆ ಬ್ಲಾಕ್ ಮಾಡಿದ ಕಾಂಗ್ರೆಸ್ ಕಾರ್ಯಕತ್ತರು ತಮ್ಮ ನಾಯಕರಿಗೆ ಅನುಕೂಲಕರವಾಗಿರಲಿ ಎನ್ನುವ ಕಾರಣಕ್ಕೆ ಕಚೇರಿಯ ಎದುರೇ ಸ್ಟೇಜ್ ನಿರ್ಮಿಸಿದ್ದರು. ಕಾರ್ಯಕ್ರಮಕ್ಕೆ ಸ್ಟೇಜ್ ಹಾಕುವ ಕೆಲಸ ಬೆಳಿಗ್ಗೆಯಿಂದಲೇ ಪ್ರಾರಂಭವಾಗಿದ್ದು ಮಧ್ಯಾಹ್ನದ ಬಳಿಕ ರಸ್ತೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಯಿತು. ಆ ರಸ್ತೆಯಲ್ಲಿ ಮೂರ್ನಾಕು ಆಸ್ಪತ್ರೆಗಳಿವೆ. ಅನೇಕ ವ್ಯಾಪಾರಿ ಕೇಂದ್ರಗಳಿವೆ. ಮಾರುಕಟ್ಟೆ ಇದೆ. ಅಂತಹ ಸ್ಥಳದಲ್ಲಿ ರಾಜಾರೋಷವಾಗಿ ರಸ್ತೆಯನ್ನು ನಾಲ್ಕು ಗಂಟೆ ಬ್ಲಾಕ್ ಮಾಡಿದ್ದು ಸರಿಯಾ ಎನ್ನುವುದು ಜನರ ಪ್ರಶ್ನೆ.


ಅಷ್ಟಕ್ಕೂ ಇದು ಕಾಂಗ್ರೆಸ್ ಪಕ್ಷದ ವೈಯಕ್ತಿಕ ಕಾರ್ಯಕ್ರಮ. ಇದಕ್ಕೂ ಸಾರ್ವಜನಿಕರಿಗೂ ಏನೂ ಸಂಬಂಧ ಇಲ್ಲ. ಒಂದು ವೇಳೆ ಸಭೆ ಮಾಡಲು ಜಾಗ ಬೇಕಾಗಿದ್ದಲ್ಲಿ ಅಲ್ಲಿಯೇ ಹತ್ತಿರದಲ್ಲಿ ಕದ್ರಿ ಬಯಲು ಮಂದಿರ ಇದೆ. ಅಲ್ಲಿ ಮಾಡಬಹುದಿತ್ತು. ಬಹುಶ: ಸೇರುವ ನಾಲ್ಕು ಜನರಿಗೋಸ್ಕರ ಅಲ್ಲಿ ಬೇಡಾ ಎಂದು ಬಿಲ್ಡಪ್ ಗಾಗಿ ಮುಖ್ಯರಸ್ತೆಯಲ್ಲಿಯೇ ಕುರ್ಚಿಗಳನ್ನು ಹಾಕಿದ್ದು ಸರಿಯಾ ಎನ್ನುವುದು ಜನರ ಪ್ರಶ್ನೆ.

ಅಲ್ಲಿನ ಸ್ಥಳೀಯರಾದ,  ಸಾಮಾಜಿಕ ಹೋರಾಟಗಾರ ಜೆರಾಲ್ಡ್ ಟವರ್ಸ್ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪೊಲೀಸ್ ಕಮೀಷನರ್ ಅವರಿಗೆ ತಾನು ಪತ್ರ ಮುಖೇನ ದೂರು ಕೊಡಲಿದ್ದು, ರಸ್ತೆ ಮಧ್ಯದಲ್ಲಿಯೇ ಕಾರ್ಯಕ್ರಮ ನಡೆಸಲು ಪೊಲೀಸ್ ಇಲಾಖೆ ಅನುಮತಿ ಕೊಟ್ಟಿದ್ದೆಯಾ ಎಂದು ಕೇಳುತ್ತೇನೆ ಎಂದು ಅವರು ತಿಳಿಸಿದ್ದಾರೆ. ಒಂದು ವೇಳೆ ಪೊಲೀಸ್ ಅನುಮತಿ ಇಲ್ಲದೆ ರಸ್ತೆ ಮಧ್ಯ ಕಾರ್ಯಕ್ರಮ ಮಾಡಿ ಮೂರ್ನಾಕು ಘಂಟೆ ರಸ್ತೆ ಬ್ಲಾಕ್ ಮಾಡಿರುವ ಬಗ್ಗೆ ಪೊಲೀಸ್ ಅಧಿಕಾರಿಗಳು ಏನು ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ ಎಂದು ಜೆರಾಲ್ಡ್ ತಿಳಿಸಿದರು.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search