• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಶ್ಮೀರದಲ್ಲಿ ಮೂವರು ಉಗ್ರರ ಸಂಹಾರ

TNN Correspondent Posted On November 7, 2017
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ನೇಮಿಸಿರುವ ಸಂಧಾನಕಾರ ದಿನೇಶ್ವರ್  ಶರ್ಮಾ ಮಾತುಕತೆ ಮೂಲಕವಾದರೂ ಸಮಸ್ಯೆ ಬಗೆಹರಿಸುವ ಮಾತನಾಡಿರುವ ಬೆನ್ನಲ್ಲೇ ಗಡಿಯಲ್ಲಿ ಉಪಟಳ ಆರಂಭಿಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಪುಲ್ವಾಮಾ ಜಿಲ್ಲೆಯ ಕಂಡಿಲ್ ಆಗ್ಲಾರ್ ಗ್ರಾಮದ ಬಳಿ ಉಗ್ರರು ಅಡಗಿರುವ ಕುರಿತು ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡ ಸೇನೆ, ಪೊಲೀಸರು ಹಾಗೂ ಸಿಆರ್ ಪಿಎಫ್ ಸಿಬ್ಬಂದಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಆದಾಗ್ಯೂ ಗುಂಡಿನ ಚಕಮಕಿ ವೇಳೆ ಒಬ್ಬ ನಾಗರಿಕರಿಗೆ ಗಾಯಗಳಾಗಿವೆ.

ಮೂವರು ಉಗ್ರರಲ್ಲಿ ಒಬ್ಬ ಸ್ಥಳೀಯ ಹಾಗೂ ಇಬ್ಬರು ವಿದೇಶಿ ಉಗ್ರರಿರಬಹುದು ಎಂದು ಅಂದಾಜಿಸಲಾಗಿದೆ ಎಂದು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶ ಮುನೀರ್ ಖಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಒಂದು ಸಾಮಾನ್ಯ ಪಿಸ್ತೂಲು ಹಾಗೂ ಒಂದು ಎಕೆ 47 ಗನ್ ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ. ಗಾಯಾಳು ನಾಗರಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಕಳೆದ ವಾರವಷ್ಟೇ ಪುಲ್ವಾಮಾ ಜಿಲ್ಲೆಯಲ್ಲಿ ಗೌಹಾರ್ ಭಟ್ ಎಂಬ ಆರೆಸ್ಸೆಸ್ ಮುಖಂಡರನ್ನ ಹತ್ಯೆ ಮಾಡಲಾಗಿತ್ತು. ಜಮ್ಮು-ಕಾಶ್ಮೀರದಲ್ಲಿ ಶಾಂತಿ ಮಾತುಕತೆ ಮೂಲಕವಾದರೂ ಸರಿ, ಶಾಂತಿ ಕಾಪಾಡಬೇಕು ಎಂಬ ಕಾರಣ ಕೇಂದ್ರ ಸರ್ಕಾರ ದಿನೇಶ್ವರ್ ಶರ್ಮಾರನ್ನು ಸಂಧಾನಕಾರರನ್ನಾಗಿ ನೇಮಿಸಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search