• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

17 ವರ್ಷದೊಳಗಿನವರ ವಿಶ್ವಕಪ್ ಯಶಸ್ವಿ ಆಯೋಜನೆಗೆ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ತಿಳಿಸಿದ ಫಿಪಾ ಅಧ್ಯಕ್ಷ!

TNN Correspondent Posted On November 7, 2017
0


0
Shares
  • Share On Facebook
  • Tweet It

2011ರ ಕಾಮನ್ ವೆಲ್ತ್ ಗೇಮ್ಸ್ ಬಳಿಕ ಬಯಲಿಗೆ ಬಂದ ವಿವಾದ ನೆನಪಿರಬೇಕು. ಯುಪಿಎ ಸರ್ಕಾರ ಟಿಶ್ಯೂ ಪೇಪರ್ ನಿಂದ ಹಿಡಿದು ಕ್ರೀಡಾಕೂಟಕ್ಕೆ ಖರೀದಿಸಿದ ಪ್ರತಿ ವಸ್ತುವಿನಲ್ಲೂ ಹಣ ಎಗರಿಸಿದೆ ಎಂಬ ಆರೋಪ ಕೇಳಿಬಂದಿದ್ದವು. ದೇಶದ ಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿತ್ತು. ಕಾಂಗ್ರೆಸ್ಸಿನ ಭ್ರಷ್ಟಾಚಾರ ವಿಶ್ವಾದ್ಯಂತ ಬಹಿರಂಗವಾಗಿತ್ತು.

ಆದರೆ ಇತ್ತೀಚೆಗಷ್ಟೇ ಭಾರತ ಫಿಫಾ ಅಂತಾರಾಷ್ಟ್ರೀಯ 17 ವರ್ಷದೊಳಗಿನವರ ಫುಟ್ ಬಾಲ್ ವಿಶ್ವಕಪ್ ಅನ್ನು ಭಾರತ ಆಯೋಜಿಸಿದ್ದನ್ನು ಫಿಫಾ ಅಧ್ಯಕ್ಷರೇ ಮೆಚ್ಚಿದ್ದಾರೆ. ಅಷ್ಟೇ ಅಲ್ಲ, ಯಶಸ್ವಿ ಆಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ಯಶಸ್ವಿ ಆಯೋಜನೆ ಕುರಿತು ಫಿಫಾ ಅಧ್ಯಕ್ಷ ಜಿಯೋವನ್ನಿ ವಿನ್ಸೆಂಝೋ ಪ್ರಧಾನಿ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ಫಿಫಾ ಗಣ್ಯರ ತಂಡ ಭಾರತದಲ್ಲಿ ಹಲವು ಸ್ಮರಣೀಯ ನೆನಪುಗಳನ್ನು ಹೊತ್ತುಕೊಂಡು ಜುರಿಚ್ ತಲುಪಿದೆ. ಯಶಸ್ವಿಯಾಗಿ ಟೂರ್ನಿ ಆಯೋಜಿಸಿದ ನಿಮಗೆ ಹಾಗೂ ಸ್ಥಳೀಯ ಆಯೋಜನೆ ಸಮಿತಿಗಳಿಗೆ ನನ್ನ ಅಭಿನಂದನೆ ಸಲ್ಲುತ್ತವೆ. ನೀವು ಟೂರ್ನಿ ಆಯೋಜಿಸಲು ವ್ಯಯಿಸಿದ ಶ್ರಮ ಅಭಿನಂದನಾರ್ಹ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಪ್ರಧಾನಿಯವರನ್ನು ಭೇಟಿ ಮಾಡಲು ಆಗದ ಕಾರಣ ಬೇಸರವನ್ನೂ ವ್ಯಕ್ತಪಡಿಸಿರುವ ನಿನ್ಸೆಂಝೋ, ಹಲವು ಬದ್ಧತೆ ಹಾಗೂ ಬಿಡುವಿಲ್ಲದ ವೇಳಾಪಟ್ಟಿ ಇದ್ದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಆಗಲಿಲ್ಲ. ಆದರೂ ಮುಂದಿನ ದಿನಗಳಲ್ಲಿ ಫುಟ್ ಬಾಲ್ ಅಭಿವೃದ್ಧಿ ಕುರಿತು ಮೋದಿ ಅವರ ವಿಚಾರ, ಯೋಜನೆಗಳು ವಿನಿಮಯ ಆಗಲಿವೆ ಎಂಬ ನಂಬಿಕೆಯಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search