• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೋಟು ನಿಷೇಧದ ಬಳಿಕ ಖೋಟಾ ನೋಟಿಗೆ ಕುತ್ತು

TNN Correspondent Posted On November 7, 2017


  • Share On Facebook
  • Tweet It

ದೆಹಲಿ: ಕಳೆದ ವರ್ಷ ನೋಟು ನಿಷೇಧಿಸಿದ ಬಳಿಕ ಖೋಟಾ ನೋಟುಗಳ ಪತ್ತೆಯಲ್ಲಿ ಗಣನೀಯವಾಗಿ ಕುಸಿತವಾಗಿದೆ ಎಂದು ವರದಿಯೊಂದರಿಂದ ತಿಳಿದುಬಂದಿದೆ.

2015, 16ಕ್ಕೆ ಹೋಲಿಸಿದರೆ ದೇಶದಲ್ಲಿ 2016ರ ನವೆಂಬರ್ ಬಳಿಕ ಇದುವರೆಗೆ ನಕಲಿ ನೋಟುಗಳ ಹಾವಳಿ ಕಡಿಮೆಯಾಗಿದೆ. 2017ರಲ್ಲಿ ದೇಶದಲ್ಲಿ 16 ಕೋಟಿ ನಕಲಿ ನೋಟುಗಳು ಪತ್ತೆಯಾಗಿವೆ. ಆದರೆ 2015ರಲ್ಲಿ ದೇಶದಲ್ಲಿ 44 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು, 2016ರಲ್ಲಿ 51 ಕೋಟಿ ರೂ. ಮೌಲ್ಯದ ನಕಲಿ ನೋಟು ವಶಪಡಿಸಿಕೊಳ್ಳಲಾಗಿತ್ತು.

ಆದರೆ ನೋಟು ನಿಷೇಧದ ಬಳಿಕ ಹೊಸ ನೋಟುಗಳಲ್ಲಿ ಬದಲಾಯಿಸಿದ ತಂತ್ರಜ್ಞಾನ, ನಕಲಿ ನೋಟು ತಡೆಗೆ ಸರ್ಕಾರ ಕೈಗೊಂಡ ಕ್ರಮಗಳಿಂದ ಖೋಟಾ ನೋಟು ಹಾವಳಿ ಕಡಿಮೆಯಾಗಿದೆ.

ಮೊದಲು ದೇಶದ ನೋಟುಗಳನ್ನು ಅನಾಮತ್ತು ನಕಲಿ ಮಾಡಲಾಗುತ್ತಿತ್ತು. ಆದರೆ ಈ ಅದು ಸಾಧ್ಯವಾಗುತ್ತಿಲ್ಲ. ನಕಲಿನೋಟು ಮುದ್ರಿಸುವವರ ಹಾವಳಿಗೆ ಕಡಿವಾಣ ಬಿದ್ದಿದ್ದು, ಪ್ರಸಕ್ತ ವರ್ಷದಲ್ಲಿ ಪತ್ತೆಯಾದ ನೋಟುಗಳಲ್ಲಿ ಬಹುತೇಕ ಕಂಪ್ಯೂಟರ್ ನಲ್ಲಿ ಸ್ಕ್ಯಾನ್ ಹಾಗೂ ಜೆರಾಕ್ಸ್ ಮಾಡಲಾಗಿದೆ ಎಂದು ವರದಿಯಿಂದ ತಿಳಿದುಬಂದಿದೆ.

ಆದಾಗ್ಯೂ, ದೇಶದ ವಿತ್ತ ವಲಯವನ್ನೇ ಬುಡಮೇಲು ಮಾಡುವ ಖೋಟಾ ನೋಟುಗಳು ನೋಟ್ ಬ್ಯಾನ್ ನಿರ್ಧಾರದಿಂದ ಕಡಿಮೆಯಾದವು ಎಂಬುದು ನಿಟ್ಟುಸಿರು ಬಿಡುವ ವಿಚಾರ.

  • Share On Facebook
  • Tweet It


- Advertisement -


Trending Now
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
Leave A Reply

  • Recent Posts

    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
  • Popular Posts

    • 1
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 2
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 3
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 4
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 5
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search