• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉ.ಪ್ರ. ಮದರಸಾಗಳಲ್ಲಿ ಎನ್ ಸಿಇಆರ್ ಟಿ ಪುಸ್ತಕ ಪಠ್ಯವಾಗಿಸಲು ಸರ್ಕಾರ ನಿರ್ಧಾರ

TNN Correspondent Posted On November 8, 2017
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಹಲವರ ವಿರೋಧದ ನಡುವೆಯೂ ಸ್ವಾತಂತ್ರ್ಯ ದಿನದಂದು ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿ ರಾಷ್ಟ್ರ ಪ್ರೇಮ ಹಾಗೂ ದಿಟ್ಟತನ ಮೆರೆದಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಈಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಮದರಸಾಗಳಲ್ಲಿರುವ ಧರ್ಮ ಬೋಧನೆ ಬಿಟ್ಟು, ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ (ಎನ್ ಸಿಇಆರ್ ಟಿ) ಪಠ್ಯಪುಸ್ತಕದನ್ವಯ ಪಾಠ ಮಾಡುವ ಕುರಿತು ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ.

ನಿರೀಕ್ಷಿತವಾಗಿಯೇ ಕೆಲವು ಮೂಲಭೂತವಾದಿಗಳು, ಎಡಬಿಡಂಗಿಗಳು ಸರ್ಕಾರದ ನಿರ್ಧಾರದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಇದು ವೈಯಕ್ತಿಕ ಆಚರಣೆ, ಸ್ವಾಂತಂತ್ರ್ಯ,ಶಿಕ್ಷಣ ಹಕ್ಕು ಕಸಿದಂತಾಗುತ್ತದೆ ಎಂದು ಹೇಳಿದ್ದಾರೆ.

ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಉತ್ತರ ಪ್ರದೇಶ ಸರ್ಕಾರ, ನಾವು ಯಾವುದೇ ಮಡಿವಂತ ಶಿಕ್ಷಣದ ವಿರುದ್ಧ ಯೋಜನೆ ರೂಪಿಸಿಲ್ಲ. ರಾಜ್ಯದ ಯಾವುದೇ ವ್ಯಕ್ತಿಯ ವೈಯಕ್ತಿಕ ಬೆಳವಣಿಗೆಗೆ ಈ ಯೋಜನೆ ಅಡ್ಡಿಯಾಗದ ಹಾಗೆ ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

ನಾವು ಯಾವುದೇ ಧರ್ಮ, ಜನರ ಭಾವನೆಗೆ ಧಕ್ಕೆ ಹಾಗೂ ಮಡಿವಂತಿಕೆ ಹಾಳು ಮಾಡಲು ಈ ಚಿಂತನೆ ನಡೆಸಿಲ್ಲ, ಆದರೆ ಈ ಸಮತೋಲಿತ ಶೈಕ್ಷಣಿಕ ಪದ್ಧತಿಯಿಂದ ಯಾರಿಗೂ ಅನ್ಯಾಯವಾಗುವುದಿಲ್ಲ, ಅವರನ್ನು ವಿಚಲಿತಗೊಳಿಸುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಲಕ್ಷ್ಮೀನಾರಾಯಣ್ ಚೌಧರಿ ತಿಳಿಸಿದ್ದಾರೆ.

ಪ್ರಸ್ತುತ ತಂತ್ರಜ್ಞಾನ ಯುಗ ಚಾಲ್ತಿಯಲ್ಲಿದ್ದು, ಮದರಸಾಗಳಲ್ಲಿ ಕಲಿತವರಾರೂ ಎಂಜಿನಿಯರ್, ಡಾಕ್ಟರ್, ವಿಜ್ಞಾನಿ ಹಾಗೂ ನಾಗರಿಕ ಸೇವೆಯಲ್ಲಿ ತೊಡಗಿಲ್ಲ. ಹಾಗಾಗಿ ಕೌಶಲಯುತ ತರಬೇತಿ ನೀಡಲು ಈ ಯೋಜನೆಗೆ ಕೈಹಾಕಲು ಚಿಂತನೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಸುಮಾರು 16 ಸಾವಿರ ಮದರಸಾಗಳಿದ್ದು, ಬಹುತೇಕ ಮದರಸಾಗಳು ಬರೀ ಧರ್ಮಬೋಧನೆಗೆ ಪ್ರಾಮುಖ್ಯ ನೀಡುತ್ತಿವೆ ಎಂಬ ಆರೋಪದಿಂದ ಯೋಗಿ ಆದಿತ್ಯನಾಥರು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ.

 

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search