• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉ.ಪ್ರ. ಮದರಸಾಗಳಲ್ಲಿ ಎನ್ ಸಿಇಆರ್ ಟಿ ಪುಸ್ತಕ ಪಠ್ಯವಾಗಿಸಲು ಸರ್ಕಾರ ನಿರ್ಧಾರ

TNN Correspondent Posted On November 8, 2017
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಹಲವರ ವಿರೋಧದ ನಡುವೆಯೂ ಸ್ವಾತಂತ್ರ್ಯ ದಿನದಂದು ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿ ರಾಷ್ಟ್ರ ಪ್ರೇಮ ಹಾಗೂ ದಿಟ್ಟತನ ಮೆರೆದಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಈಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಮದರಸಾಗಳಲ್ಲಿರುವ ಧರ್ಮ ಬೋಧನೆ ಬಿಟ್ಟು, ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ (ಎನ್ ಸಿಇಆರ್ ಟಿ) ಪಠ್ಯಪುಸ್ತಕದನ್ವಯ ಪಾಠ ಮಾಡುವ ಕುರಿತು ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ.

ನಿರೀಕ್ಷಿತವಾಗಿಯೇ ಕೆಲವು ಮೂಲಭೂತವಾದಿಗಳು, ಎಡಬಿಡಂಗಿಗಳು ಸರ್ಕಾರದ ನಿರ್ಧಾರದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಇದು ವೈಯಕ್ತಿಕ ಆಚರಣೆ, ಸ್ವಾಂತಂತ್ರ್ಯ,ಶಿಕ್ಷಣ ಹಕ್ಕು ಕಸಿದಂತಾಗುತ್ತದೆ ಎಂದು ಹೇಳಿದ್ದಾರೆ.

ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಉತ್ತರ ಪ್ರದೇಶ ಸರ್ಕಾರ, ನಾವು ಯಾವುದೇ ಮಡಿವಂತ ಶಿಕ್ಷಣದ ವಿರುದ್ಧ ಯೋಜನೆ ರೂಪಿಸಿಲ್ಲ. ರಾಜ್ಯದ ಯಾವುದೇ ವ್ಯಕ್ತಿಯ ವೈಯಕ್ತಿಕ ಬೆಳವಣಿಗೆಗೆ ಈ ಯೋಜನೆ ಅಡ್ಡಿಯಾಗದ ಹಾಗೆ ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

ನಾವು ಯಾವುದೇ ಧರ್ಮ, ಜನರ ಭಾವನೆಗೆ ಧಕ್ಕೆ ಹಾಗೂ ಮಡಿವಂತಿಕೆ ಹಾಳು ಮಾಡಲು ಈ ಚಿಂತನೆ ನಡೆಸಿಲ್ಲ, ಆದರೆ ಈ ಸಮತೋಲಿತ ಶೈಕ್ಷಣಿಕ ಪದ್ಧತಿಯಿಂದ ಯಾರಿಗೂ ಅನ್ಯಾಯವಾಗುವುದಿಲ್ಲ, ಅವರನ್ನು ವಿಚಲಿತಗೊಳಿಸುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಲಕ್ಷ್ಮೀನಾರಾಯಣ್ ಚೌಧರಿ ತಿಳಿಸಿದ್ದಾರೆ.

ಪ್ರಸ್ತುತ ತಂತ್ರಜ್ಞಾನ ಯುಗ ಚಾಲ್ತಿಯಲ್ಲಿದ್ದು, ಮದರಸಾಗಳಲ್ಲಿ ಕಲಿತವರಾರೂ ಎಂಜಿನಿಯರ್, ಡಾಕ್ಟರ್, ವಿಜ್ಞಾನಿ ಹಾಗೂ ನಾಗರಿಕ ಸೇವೆಯಲ್ಲಿ ತೊಡಗಿಲ್ಲ. ಹಾಗಾಗಿ ಕೌಶಲಯುತ ತರಬೇತಿ ನೀಡಲು ಈ ಯೋಜನೆಗೆ ಕೈಹಾಕಲು ಚಿಂತನೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಸುಮಾರು 16 ಸಾವಿರ ಮದರಸಾಗಳಿದ್ದು, ಬಹುತೇಕ ಮದರಸಾಗಳು ಬರೀ ಧರ್ಮಬೋಧನೆಗೆ ಪ್ರಾಮುಖ್ಯ ನೀಡುತ್ತಿವೆ ಎಂಬ ಆರೋಪದಿಂದ ಯೋಗಿ ಆದಿತ್ಯನಾಥರು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ.

 

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search