• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉ.ಪ್ರ. ಮದರಸಾಗಳಲ್ಲಿ ಎನ್ ಸಿಇಆರ್ ಟಿ ಪುಸ್ತಕ ಪಠ್ಯವಾಗಿಸಲು ಸರ್ಕಾರ ನಿರ್ಧಾರ

TNN Correspondent Posted On November 8, 2017
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಹಲವರ ವಿರೋಧದ ನಡುವೆಯೂ ಸ್ವಾತಂತ್ರ್ಯ ದಿನದಂದು ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿ ರಾಷ್ಟ್ರ ಪ್ರೇಮ ಹಾಗೂ ದಿಟ್ಟತನ ಮೆರೆದಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಈಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಮದರಸಾಗಳಲ್ಲಿರುವ ಧರ್ಮ ಬೋಧನೆ ಬಿಟ್ಟು, ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ (ಎನ್ ಸಿಇಆರ್ ಟಿ) ಪಠ್ಯಪುಸ್ತಕದನ್ವಯ ಪಾಠ ಮಾಡುವ ಕುರಿತು ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ.

ನಿರೀಕ್ಷಿತವಾಗಿಯೇ ಕೆಲವು ಮೂಲಭೂತವಾದಿಗಳು, ಎಡಬಿಡಂಗಿಗಳು ಸರ್ಕಾರದ ನಿರ್ಧಾರದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಇದು ವೈಯಕ್ತಿಕ ಆಚರಣೆ, ಸ್ವಾಂತಂತ್ರ್ಯ,ಶಿಕ್ಷಣ ಹಕ್ಕು ಕಸಿದಂತಾಗುತ್ತದೆ ಎಂದು ಹೇಳಿದ್ದಾರೆ.

ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಉತ್ತರ ಪ್ರದೇಶ ಸರ್ಕಾರ, ನಾವು ಯಾವುದೇ ಮಡಿವಂತ ಶಿಕ್ಷಣದ ವಿರುದ್ಧ ಯೋಜನೆ ರೂಪಿಸಿಲ್ಲ. ರಾಜ್ಯದ ಯಾವುದೇ ವ್ಯಕ್ತಿಯ ವೈಯಕ್ತಿಕ ಬೆಳವಣಿಗೆಗೆ ಈ ಯೋಜನೆ ಅಡ್ಡಿಯಾಗದ ಹಾಗೆ ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

ನಾವು ಯಾವುದೇ ಧರ್ಮ, ಜನರ ಭಾವನೆಗೆ ಧಕ್ಕೆ ಹಾಗೂ ಮಡಿವಂತಿಕೆ ಹಾಳು ಮಾಡಲು ಈ ಚಿಂತನೆ ನಡೆಸಿಲ್ಲ, ಆದರೆ ಈ ಸಮತೋಲಿತ ಶೈಕ್ಷಣಿಕ ಪದ್ಧತಿಯಿಂದ ಯಾರಿಗೂ ಅನ್ಯಾಯವಾಗುವುದಿಲ್ಲ, ಅವರನ್ನು ವಿಚಲಿತಗೊಳಿಸುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಲಕ್ಷ್ಮೀನಾರಾಯಣ್ ಚೌಧರಿ ತಿಳಿಸಿದ್ದಾರೆ.

ಪ್ರಸ್ತುತ ತಂತ್ರಜ್ಞಾನ ಯುಗ ಚಾಲ್ತಿಯಲ್ಲಿದ್ದು, ಮದರಸಾಗಳಲ್ಲಿ ಕಲಿತವರಾರೂ ಎಂಜಿನಿಯರ್, ಡಾಕ್ಟರ್, ವಿಜ್ಞಾನಿ ಹಾಗೂ ನಾಗರಿಕ ಸೇವೆಯಲ್ಲಿ ತೊಡಗಿಲ್ಲ. ಹಾಗಾಗಿ ಕೌಶಲಯುತ ತರಬೇತಿ ನೀಡಲು ಈ ಯೋಜನೆಗೆ ಕೈಹಾಕಲು ಚಿಂತನೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಸುಮಾರು 16 ಸಾವಿರ ಮದರಸಾಗಳಿದ್ದು, ಬಹುತೇಕ ಮದರಸಾಗಳು ಬರೀ ಧರ್ಮಬೋಧನೆಗೆ ಪ್ರಾಮುಖ್ಯ ನೀಡುತ್ತಿವೆ ಎಂಬ ಆರೋಪದಿಂದ ಯೋಗಿ ಆದಿತ್ಯನಾಥರು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ.

 

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search