• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಮಾಚಲ ಪ್ರದೇಶದಲ್ಲಿ ಇಂದು ಮತದಾನ, ಅರಳುವುದೇ ಕಮಲ?

TNN Correspondent Posted On November 9, 2017
0


0
Shares
  • Share On Facebook
  • Tweet It

ಕಣಿವೆ ರಾಜ್ಯ ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುವನಾವಣೆ ಆರಂಭವಾಗಿದ್ದು, ಬೆಳಗ್ಗೆಯೇ ಮತದಾನ ಶುರುವಾಗಿದೆ. ಚಳಿಯನ್ನೂ ಲೆಕ್ಕಿಸದೆ ಜನ ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗ್ಗೆ 7 ಗಂಟೆಗೇ ಮತದಾನ ಆರಂಭವಾಗಿದ್ದು, ಸಂಜೆ ಐದು ಗಂಟೆಯವರೆಗೆ ನಡೆಯಲಿದೆ. ಒಂದೇ ಹಂತದಲ್ಲಿ 68 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಗೆಲುವಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ತೀವ್ರ ಪೈಪೋಟಿ ಎದುರಿಸುತ್ತಿವೆ.

ರಾಜ್ಯಾದ್ಯಂತ 7,525 ಮತಗಟ್ಟೆ ತೆರೆಯಲಾಗಿದ್ದು, 25.68 ಲಕ್ಷ ಪುರುಷ ಹಾಗೂ 24.57 ಲಕ್ಷ ಮಹಿಳಾ ಮತದಾರರಿದ್ದಾರೆ. ಒಟ್ಟು 50 ಲಕ್ಷ ಮತದಾರರಿದ್ದು, ಯಾರ ಒಲವು ಯಾವ ಪಕ್ಷದ ಕಡೆ ಎಂಬುದು ಇಂದು ಮತಯಂತ್ರಗಳಲ್ಲಿ ಮತಗಳ ರೂಪದಲ್ಲಿ ಸೇರಲಿವೆ.

ಎಲ್ಲ 68 ಕ್ಷೇತ್ರಗಳಲ್ಲೂ ಬಿಜೆಪಿ ಹಾಗೂ ಕಾಂಗ್ರೆಸ್ ಸ್ಪರ್ಧಿಸುತ್ತಿವೆ. ಕಾಂಗ್ರೆಸ್ ನಿಂದ ವೀರಭದ್ರಸಿಂಗ್, ಬೀಜೆಪಿಯಿಂದ ಪ್ರೇಮ್ ಕುಮಾರ್ ಧುಮಾಲ್ ಸಿಎಂ ಅಭ್ಯರ್ಥಿಗಳಾಗಿದ್ದಾರೆ. ಉಳಿದಂತೆ ಬಿಎಸ್ ಪಿ 42, ಸಿಪಿಎಂ 14 ಕ್ಷೇತ್ರಗಳಲ್ಲಿ ಕಣಕ್ಕಿಳಿದಿವೆ.

ನ.18ರಂದು ಫಲಿತಾಂಶ ಹೊರಬೀಳಲಿದ್ದು, ಈಗಾಗಲೇ ಸಮೀಕ್ಷೆ ಪ್ರಕಾರ ಬಿಜೆಪಿಯೇ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search