• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಂಗ್ರೆಸ್ ರಾಜ್ಯ ಉಸ್ತುವಾರಿ ವಿರುದ್ಧ ಎಫ್ಐಆರ್ ದಾಖಲಿಸಲು ನ್ಯಾಯಾಂಗ ಆಯೋಗ ಆದೇಶ, ಕಾಂಗ್ರೆಸ್ಸಿಗೆ ಭಾರಿ ಮುಖಭಂಗ

TNN Correspondent Posted On November 10, 2017


  • Share On Facebook
  • Tweet It

ತಿರುವನಂತಪುರ: ಸೋಲಾರ್ ಹಗರಣ ಆರೋಪಿ ಸರಿತಾ ನಾಯರ್ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿರುದ್ಧ ಲೈಂಗಿಕ ಕಿರುಕುಳ ಕುರಿತು ಸರ್ಕಾರಕ್ಕೆ ನೀಡಿದ್ದ ಪತ್ರ ಈಗ ನ್ಯಾಯಾಂಗದ ಮೆಟ್ಟಿಲೇರಿದ್ದು, ನಾಯರ್ ಹೇಳಿಕೆ ಆಧರಿಸಿ ವೇಣುಗೋಪಾಲ್ ವಿರುದ್ಧ ಎಫ್ಐಆರ್ ದಾಖಲಿಸಬಹುದು ಎಂದು ನ್ಯಾಯಾಂಗ ಆಯೋಗ ತಿಳಿಸಿದೆ.

ಈ ಪ್ರಕರಣ ಕೆ.ಸಿ.ವೇಣುಗೋಪಾಲ್ ಗೆ ಕುತ್ತಾಗಿದ್ದು, ಕರ್ನಾಟಕದಲ್ಲಿ ಚುನಾವಣೆ ಸಮೀಪಿಸುತ್ತಿರುವಾಗ ಇಂಥ ಹಗರಣ ಬೆಳಕಿಗೆ ಬಂದಿರುವುದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ.

ಕೇರಳ ವಿಧಾನಸಭೆ ಸೋಲಾರ್ ಹಗಣರದ ಮರುತನಿಖೆಗೆ ಆದೇಶ ನೀಡಿದ ಬೆನ್ನಲ್ಲೇ, ಕೆ.ಸಿ.ವೇಣುಗೋಪಾಲ್ ವಿರುದ್ಧ ಸರಿತಾ 2013ರಲ್ಲಿ ಮಾಡಿರುವ ಆರೋಪ ಪರಿಗಣಿಸಲು ನ್ಯಾಯಾಂಗ ಆಯೋಗ ಹೇಳಿದೆ.

ವೇಣುಗೋಪಾಲ್ ಅವರನ್ನು ಟೀಂ ಸೋಲಾರ್ ಬ್ರ್ಯಾಂಚ್ ಉದ್ಘಾಟನೆಗೆ ತೆರಳಿದ್ದಾಗ ವೇಣುಗೋಪಾಲ್ ನನ್ನ ಹಿಂಭಾಗ ಸವರಿದ್ದಲ್ಲದೇ, ಕೆಲ ದಿನಗಳ ಬಳಿಕ ತುಂಬ ಮೃದುವಾಗಿದೆ, ಸ್ಟಿಲ್ ಲವ್ ಯೂ ಎಂದು ಮೊಬೈಲ್ಗೆ ಮೆಸೇಜ್ ಕಳುಹಿಸಿದ್ದಾರೆ. ಅಲ್ಲದೆ ಇಕೋ ಟೂರಿಸಂಗೆ ಸಂಬಂಧಿಸಿದ ಪತ್ರಗಳಿಗೆ ಸಹಿ ಹಾಕಲಾಗುವುದು ಎಂದು ರೋಸ್ ಹೌಸಿಗೆ ಕರೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನನ್ನ ಮೊಬೈಲ್ಗೆ ವೇಣುಗೋಪಾಲ್ ಮಾಡಿರುವ ಕರೆಗಳ ಕುರಿತು ದಾಖಲೆಗಳಿವೆ ಎಂದು ಸರಿತಾ ನೀಡಿರುವ ಹೇಳಿಕೆ ಆಧರಿಸಿ ನ್ಯಾಯಾಂಗ ಆಯೋಗ ಎಫ್ಐಆರ್ ದಾಖಲಿಸಲು ಸೂಚಿಸಿದೆ.

ಒಟ್ಟಿನಲ್ಲಿ ಈ ಪ್ರಕರಣ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಕಾಂಗ್ರೆಸ್ ವಿರುದ್ಧದ ಸಮರ ಎಂದೇ ಬಿಂಬಿಸಲಾಗಿದ್ದರೂ, ಕೆ.ಸಿ.ವೇಣುಗೋಪಾಲ್ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವುದರಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ಇದು ಮುಜಗರದ ವಿಷಯವಾಗಿ ಪರಿಣಮಿಸಿದೆ.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search