• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿವಾದಿತ ಧರ್ಮಗುರು ಜಾಕೀರ್ ನಾಯ್ಕ್ ಹಸ್ತಾಂತರಕ್ಕೆ ಮಲೇಷ್ಯಾ ಒಪ್ಪಿಗೆ

TNN Correspondent Posted On November 10, 2017


  • Share On Facebook
  • Tweet It

ದೆಹಲಿ: ವಿವಾದಿತ ಧರ್ಮಗುರು, ಮುಸ್ಲಿಮರೆಲ್ಲರೂ ಹತ್ಯಾರ ಹಿಡಿಯಬೇಕು ಎಂದು ದಳ್ಳುರಿ ಬಿತ್ತುವ, ಪ್ರಸ್ತುತ ಹವಾಲ ದಂಧೆಯಲ್ಲಿ ಎನ್ಐಎ ಉರುಳಿಗೆ ಸಿಲುಕಿಕೊಂಡಿರುವ ಜಾಕೀರ್ ನಾಯ್ಕ್ ಹಸ್ತಾಂತರಕ್ಕೆ ಮಲೇಷ್ಯಾ ಸರ್ಕಾರ ಒಪ್ಪಿಗೆ ನೀಡಿದೆ.

ಮಲೇಷ್ಯಾದ ಉಪ ಪ್ರಧಾನಿ ಅಹ್ಮದ್ ಜಹೀದ್ ಹಮೀದಿ ಈ ಕುರಿತು ಹೇಳಿದ್ದು, ಭಾರತ ನಾಯ್ಕ್ ಹಸ್ತಾಂತರಕ್ಕೆ ಅಧಿಕೃತ ಮನವಿ ಸಲ್ಲಿಸಿದರೆ ಹಸ್ತಾಂತರಗೊಳಿಸುವುದಾಗಿ ತಿಳಿಸಿದ್ದಾರೆ.

ಕಳೆದ ವಾರ ಜಾಕೀರ್ ನಾಯ್ಕ್ ಹಸ್ತಾಂತರದ ಮಲೇಷ್ಯಾ ಸರ್ಕಾರಕ್ಕೆ ಭಾರತ ಮನವಿ ಮಾಡುತ್ತದೆ. ಆತನ ಹಸ್ತಾಂತರಕ್ಕೆ ಮಲೇಷ್ಯಾ ಸರ್ಕಾರ ಸಹಕರಿಸಬೇಕು ಎಂದು ಕಳೆದ ವಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರವೀಶ್ ಕುಮಾರ್ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮಲೇಷ್ಯಾ ಉಪಪ್ರಧಾನಿ ಹಸ್ತಾಂತರದ ಕುರಿತು ಒಪ್ಪಿಗೆ ಸೂಚಿಸಿದ್ದಾರೆ.

ಇದಕ್ಕೆ ಭಾರತ ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ಮಲೇಷ್ಯಾ ಸರ್ಕಾರಕ್ಕೆ ಮನವಿ ಸಲ್ಲಿಸಲು ಚಿಂತನೆ ನಡೆಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಮೂಲಗಳಿಂದ ತಿಳಿದುಬಂದಿದೆ.

ಭಾಷಣದ ಮೂಲಕ ಇಸ್ಲಾಂ ಯುವಕರಿಗೆ ಮೂಲಭೂತವಾದದಲ್ಲಿ ತೊಡಗುವಂತೆ ಪ್ರಚೋದನೆ ಹಾಗೂ ಹವಾಲ ದಂಧೆಯಲ್ಲಿ ತೊಡಗಿರುವ ಆರೋಪದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಜಾಕೀರ್ ನಾಯ್ಕ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದು, ತನಿಖೆ ಸಹ ಮುಂದುವರಿಸಿದೆ.

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 4
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 5
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search