• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿವಾದಿತ ಧರ್ಮಗುರು ಜಾಕೀರ್ ನಾಯ್ಕ್ ಹಸ್ತಾಂತರಕ್ಕೆ ಮಲೇಷ್ಯಾ ಒಪ್ಪಿಗೆ

TNN Correspondent Posted On November 10, 2017
0


0
Shares
  • Share On Facebook
  • Tweet It

ದೆಹಲಿ: ವಿವಾದಿತ ಧರ್ಮಗುರು, ಮುಸ್ಲಿಮರೆಲ್ಲರೂ ಹತ್ಯಾರ ಹಿಡಿಯಬೇಕು ಎಂದು ದಳ್ಳುರಿ ಬಿತ್ತುವ, ಪ್ರಸ್ತುತ ಹವಾಲ ದಂಧೆಯಲ್ಲಿ ಎನ್ಐಎ ಉರುಳಿಗೆ ಸಿಲುಕಿಕೊಂಡಿರುವ ಜಾಕೀರ್ ನಾಯ್ಕ್ ಹಸ್ತಾಂತರಕ್ಕೆ ಮಲೇಷ್ಯಾ ಸರ್ಕಾರ ಒಪ್ಪಿಗೆ ನೀಡಿದೆ.

ಮಲೇಷ್ಯಾದ ಉಪ ಪ್ರಧಾನಿ ಅಹ್ಮದ್ ಜಹೀದ್ ಹಮೀದಿ ಈ ಕುರಿತು ಹೇಳಿದ್ದು, ಭಾರತ ನಾಯ್ಕ್ ಹಸ್ತಾಂತರಕ್ಕೆ ಅಧಿಕೃತ ಮನವಿ ಸಲ್ಲಿಸಿದರೆ ಹಸ್ತಾಂತರಗೊಳಿಸುವುದಾಗಿ ತಿಳಿಸಿದ್ದಾರೆ.

ಕಳೆದ ವಾರ ಜಾಕೀರ್ ನಾಯ್ಕ್ ಹಸ್ತಾಂತರದ ಮಲೇಷ್ಯಾ ಸರ್ಕಾರಕ್ಕೆ ಭಾರತ ಮನವಿ ಮಾಡುತ್ತದೆ. ಆತನ ಹಸ್ತಾಂತರಕ್ಕೆ ಮಲೇಷ್ಯಾ ಸರ್ಕಾರ ಸಹಕರಿಸಬೇಕು ಎಂದು ಕಳೆದ ವಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರವೀಶ್ ಕುಮಾರ್ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮಲೇಷ್ಯಾ ಉಪಪ್ರಧಾನಿ ಹಸ್ತಾಂತರದ ಕುರಿತು ಒಪ್ಪಿಗೆ ಸೂಚಿಸಿದ್ದಾರೆ.

ಇದಕ್ಕೆ ಭಾರತ ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ಮಲೇಷ್ಯಾ ಸರ್ಕಾರಕ್ಕೆ ಮನವಿ ಸಲ್ಲಿಸಲು ಚಿಂತನೆ ನಡೆಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಮೂಲಗಳಿಂದ ತಿಳಿದುಬಂದಿದೆ.

ಭಾಷಣದ ಮೂಲಕ ಇಸ್ಲಾಂ ಯುವಕರಿಗೆ ಮೂಲಭೂತವಾದದಲ್ಲಿ ತೊಡಗುವಂತೆ ಪ್ರಚೋದನೆ ಹಾಗೂ ಹವಾಲ ದಂಧೆಯಲ್ಲಿ ತೊಡಗಿರುವ ಆರೋಪದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಜಾಕೀರ್ ನಾಯ್ಕ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದು, ತನಿಖೆ ಸಹ ಮುಂದುವರಿಸಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search