• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಡಳಿತದಲ್ಲಿ ಉರ್ದು ದ್ವಿತೀಯ ಭಾಷೆ ಮಾಡಿ ಮುಸ್ಲಿಂ ಪ್ರೇಮ ಮುಂದುವರಿಸಿದ ತೆಲಂಗಾಣ ಸಿಎಂ ಕೆಸಿಆರ್

TNN Correspondent Posted On November 11, 2017
0


0
Shares
  • Share On Facebook
  • Tweet It

ಹೈದರಾಬಾದ್: ತೆಲಂಗಾಣದ ಆಡಳಿತದಲ್ಲಿ ಉರ್ದುವನ್ನು ದ್ವೀತಿಯ ಭಾಷೆಯನ್ನಾಗಿ ಮಾಡುವ ಮೂಲಕ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ. ಚಂದ್ರಶೇಖರ್ ರಾವ್  ಮತ್ತೊಮ್ಮೆ ಮುಸ್ಲಿಂ ಪ್ರೇಮ ಮುಂದುವರಿಸಿದ್ದಾರೆ.

ರಾಜ್ಯದ ಎಲ್ಲ ಅಧಿಕಾರಿಗಳು, ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳೂ ಕೂಡ ಉರ್ದು ಭಾಷೆಯಲ್ಲಿ ಸಂವಹನ ನಡೆಸಬೇಕು ಮತ್ತು ಆಡಳಿತವನ್ನು ಮಾಡಬೇಕು ಎಂದು ಸೂಚಿಸಿದ್ದಾರೆ.   ಇದು ಬಹು ದಿನಗಳ ಆಗ್ರಹವಾಗಿತ್ತು ಎಂದು ಹೇಳಿದ್ದಾರೆ.

ಇದು ಒಂದು ಜಿಲ್ಲೆ, ಒಂದು ಪ್ರದೇಶ, ಒಂದು ಹೋಬಳಿಗೆ ಅನ್ವಯಿಸುವುದಿಲ್ಲ. ಇಡೀ ರಾಜ್ಯವೇ ಒಂದು ಘಟಕ. ಆದ್ದರಿಂದ ಇಡೀ ರಾಜ್ಯಾಧ್ಯಂತ ಉರ್ದುವನ್ನು ಆಡಳಿತದಲ್ಲಿ ಎರಡನೇ ಭಾಷೆಯನ್ನಾಗಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು ಬಿಜೆಪಿ ವಕ್ತಾರ ಕೃಷ್ಣ ಸಾಗರ ‘ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಮತಕ್ಕಾಗಿ ಇಂತಹ ನೀತಿ ಜಾರಿಗೆ ತಂದಿದ್ದಾರೆ. ಮುಸ್ಲಿಂರನ್ನು ತುಷ್ಟೀಕರಣ ಮಾಡುವ ಸಿಎಂ ನಡೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಇದೆ ಕೆಸಿಆರ್ ಮುಸ್ಲಿಂರಿಗಾಗಿ ಪ್ರತ್ಯೇಕ ಐಐಟಿ ಕಾರಿಡಾರ್ ನಿರ್ಮಿಸುವ ವಿಲಕ್ಷಣ ಯೋಜನೆ ಕೈಗೊಂಡಿದ್ದರು. ಈಗ ಮತ್ತದೇ ಮುಸ್ಲಿಂ ತುಷ್ಟೀಕರಣದ ರಾಜಕೀಯ ಮಾಡುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ. ಇದು ಜನರನ್ನು ಒಡೆದು ಆಳುವ ನೀತಿಯಲ್ಲದೇ, ವಿನಾಕಾರಣ ಜನರ ಹಣವನ್ನು ವ್ಯರ್ಥ ಮಾಡುವ ಕೊಳಕು ಪ್ರಯತ್ನ ಎಂದು ಹೇಳಿದ್ದಾರೆ.

ಹಿಂದೆಯೂ ಕೆಸಿಆರ್ ಕೇವಲ ಮುಸ್ಲಿಂರ ಚಾಲಕರಿಗೆ ಆರ್ಥಿಕ ಸಹಾಯ ನೀಡಿ ತಮ್ಮ ಮುಸ್ಲಿಂ ಪ್ರೇಮ ಮೆರೆದಿದ್ದರು. ಅಲ್ಲದೇ ಮೀಸಲಿನಲ್ಲಿ ಶೇ.4 ರಷ್ಟಿದ್ದದನ್ನು ಶೇ.12ರಷ್ಟು ಹೆಚ್ಚಿಸುವ ಮೂಲಕ ಮುಸ್ಲಿಂರನ್ನು ಸೆಳೆಯುವ ಹುಚ್ಚು ಪ್ರಯತ್ನ ಮಾಡಿದ್ದರು. ಇದರಿಂದ ತೆಲಂಗಾಣದಲ್ಲಿ ಪದೇ ಪದೆ ಕೆಸಿಆರ್ ಮುಸ್ಲಿಂರನ್ನು ಒಲೈಸಲು ಹಿಂದೂಗಳನ್ನು ನಿರ್ಲಕ್ಷಿಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search