• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಡಳಿತದಲ್ಲಿ ಉರ್ದು ದ್ವಿತೀಯ ಭಾಷೆ ಮಾಡಿ ಮುಸ್ಲಿಂ ಪ್ರೇಮ ಮುಂದುವರಿಸಿದ ತೆಲಂಗಾಣ ಸಿಎಂ ಕೆಸಿಆರ್

TNN Correspondent Posted On November 11, 2017
0


0
Shares
  • Share On Facebook
  • Tweet It

ಹೈದರಾಬಾದ್: ತೆಲಂಗಾಣದ ಆಡಳಿತದಲ್ಲಿ ಉರ್ದುವನ್ನು ದ್ವೀತಿಯ ಭಾಷೆಯನ್ನಾಗಿ ಮಾಡುವ ಮೂಲಕ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ. ಚಂದ್ರಶೇಖರ್ ರಾವ್  ಮತ್ತೊಮ್ಮೆ ಮುಸ್ಲಿಂ ಪ್ರೇಮ ಮುಂದುವರಿಸಿದ್ದಾರೆ.

ರಾಜ್ಯದ ಎಲ್ಲ ಅಧಿಕಾರಿಗಳು, ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳೂ ಕೂಡ ಉರ್ದು ಭಾಷೆಯಲ್ಲಿ ಸಂವಹನ ನಡೆಸಬೇಕು ಮತ್ತು ಆಡಳಿತವನ್ನು ಮಾಡಬೇಕು ಎಂದು ಸೂಚಿಸಿದ್ದಾರೆ.   ಇದು ಬಹು ದಿನಗಳ ಆಗ್ರಹವಾಗಿತ್ತು ಎಂದು ಹೇಳಿದ್ದಾರೆ.

ಇದು ಒಂದು ಜಿಲ್ಲೆ, ಒಂದು ಪ್ರದೇಶ, ಒಂದು ಹೋಬಳಿಗೆ ಅನ್ವಯಿಸುವುದಿಲ್ಲ. ಇಡೀ ರಾಜ್ಯವೇ ಒಂದು ಘಟಕ. ಆದ್ದರಿಂದ ಇಡೀ ರಾಜ್ಯಾಧ್ಯಂತ ಉರ್ದುವನ್ನು ಆಡಳಿತದಲ್ಲಿ ಎರಡನೇ ಭಾಷೆಯನ್ನಾಗಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು ಬಿಜೆಪಿ ವಕ್ತಾರ ಕೃಷ್ಣ ಸಾಗರ ‘ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಮತಕ್ಕಾಗಿ ಇಂತಹ ನೀತಿ ಜಾರಿಗೆ ತಂದಿದ್ದಾರೆ. ಮುಸ್ಲಿಂರನ್ನು ತುಷ್ಟೀಕರಣ ಮಾಡುವ ಸಿಎಂ ನಡೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಇದೆ ಕೆಸಿಆರ್ ಮುಸ್ಲಿಂರಿಗಾಗಿ ಪ್ರತ್ಯೇಕ ಐಐಟಿ ಕಾರಿಡಾರ್ ನಿರ್ಮಿಸುವ ವಿಲಕ್ಷಣ ಯೋಜನೆ ಕೈಗೊಂಡಿದ್ದರು. ಈಗ ಮತ್ತದೇ ಮುಸ್ಲಿಂ ತುಷ್ಟೀಕರಣದ ರಾಜಕೀಯ ಮಾಡುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ. ಇದು ಜನರನ್ನು ಒಡೆದು ಆಳುವ ನೀತಿಯಲ್ಲದೇ, ವಿನಾಕಾರಣ ಜನರ ಹಣವನ್ನು ವ್ಯರ್ಥ ಮಾಡುವ ಕೊಳಕು ಪ್ರಯತ್ನ ಎಂದು ಹೇಳಿದ್ದಾರೆ.

ಹಿಂದೆಯೂ ಕೆಸಿಆರ್ ಕೇವಲ ಮುಸ್ಲಿಂರ ಚಾಲಕರಿಗೆ ಆರ್ಥಿಕ ಸಹಾಯ ನೀಡಿ ತಮ್ಮ ಮುಸ್ಲಿಂ ಪ್ರೇಮ ಮೆರೆದಿದ್ದರು. ಅಲ್ಲದೇ ಮೀಸಲಿನಲ್ಲಿ ಶೇ.4 ರಷ್ಟಿದ್ದದನ್ನು ಶೇ.12ರಷ್ಟು ಹೆಚ್ಚಿಸುವ ಮೂಲಕ ಮುಸ್ಲಿಂರನ್ನು ಸೆಳೆಯುವ ಹುಚ್ಚು ಪ್ರಯತ್ನ ಮಾಡಿದ್ದರು. ಇದರಿಂದ ತೆಲಂಗಾಣದಲ್ಲಿ ಪದೇ ಪದೆ ಕೆಸಿಆರ್ ಮುಸ್ಲಿಂರನ್ನು ಒಲೈಸಲು ಹಿಂದೂಗಳನ್ನು ನಿರ್ಲಕ್ಷಿಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search