• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರ ಗೀತೆ ಕಡ್ಡಾಯಕ್ಕೆ ಮುಸ್ಲಿಮರ ವಿರೋಧ

TNN Correspondent Posted On November 11, 2017
0


0
Shares
  • Share On Facebook
  • Tweet It

ರಾಂಚಿ: ಜಾರ್ಖಂಡನ ಎಲ್ಲ ಸರಕಾರಿ, ಖಾಸಗಿ ಶಾಲೆಗಳು ಮತ್ತು ಮದ್ರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಾಗಿ ಹಾಡಬೇಕು ಎಂಬ ನಿಯಮಕ್ಕೆ ಮುಸ್ಲಿಂರಿಂದ ವಿರೋಧ ವ್ಯಕ್ತವಾಗಿದೆ. ಇದು ಮುಸ್ಲಿಂ ಕಲಿಕಾ ಕೇಂದ್ರಗಳ ಮೂಲ ಆಶಯಕ್ಕೆ, ಮೂಲ ನಿಯಮಗಳಿಗೆ ವಿರುದ್ಧವಾದದ್ದು. ಆದ್ದರಿಂದ ಈ ನಿಯಮ ಜಾರಿಗೆ ಬೇಡ ಎಂದು ಆಗ್ರಹಿಸಿವೆ.

ಜಾರ್ಖಂಡ ಶಿಕ್ಷಣ ಸಚಿವೆ ನೀರಾ ಯಾದವ್ ಗುರುವಾರ ರಾಜ್ಯದ ಎಲ್ಲ ಶಾಲಾ, ಕಾಲೇಜುಗಳಲ್ಲಿ ಮತ್ತು ಮದರಸಾಗಳಲ್ಇ ರಾಷ್ಟ್ರಗೀತೆ ಕಡ್ಡಾಯ ಎಂದು ಆದೇಶ ಹೊರಡಿಸಿದ್ದರು.

ಬಿಜೆಪಿ ನೇತೃತ್ವದ ಜಾರ್ಖಂಡ್ ಸರಕಾರದ ನಿಯಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಬಿಜೆಪಿ ಸರಕಾರದಿಂದ ರಾಷ್ಟ್ರೀಯತೆ ಮತ್ತು ದೇಶಭಕ್ತಿಯನ್ನು ಹೇರಲಾಗುತ್ತಿದೆ ಎಂದು ಖಂಡನೆ ವ್ಯಕ್ತಪಡಿಸಿವೆ.

ರಾಷ್ಟ್ರೀಯ ಹಬ್ಬಗಳಾದ ಆಗಸ್ಟ್ 15, ಜನವರಿ 26 ರಂದು ರಾಷ್ಟ್ರಗೀತೆ ಹಾಡಲು ಅಭ್ಯಂತರವಿಲ್ಲ. ಆದರೆ ನಿತ್ಯ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯ ಮಾಡುವುದು ಸರಿಯಲ್ಲ. ಮದರಸಾಗಳು ಹಲವು ವರ್ಷಗಳಿಂದ ತಮ್ಮದೆ ನಿಯಮ ಪಾಲಿಸಿಕೊಂಡು ಬಂದಿವೆ. ಈಗಾಗಲೇ ಮದರಸಾಗಳಲ್ಲಿ ಮಕ್ಸೂದ್ ತರನ್ ಗೀತೆಯನ್ನು ನಿತ್ಯ ಹಾಡಲಾಗುತ್ತಿದೆ. ಇಂತಹ ನಿಯಮದಿಂದ ನಮ್ಮ ಮೂಲ ತತ್ತ್ವಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಜಾರ್ಖಂಡ್ ಇಸ್ಲಾಂಮಿಕ್ ಸ್ಕಾಲರ್ಸ್ ವಿರೋಧ ವ್ಯಕ್ತಪಡಿಸಿದೆ.

ಇನ್ನು ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಾರ್ಖಂಡ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಶಹೀದ್ ಅಕ್ತರ ‘ರಾಷ್ಟ್ರಗೀತೆ ಕಡ್ಡಾಯ ಮಾಡಿರುವುದು ಸ್ವಾಗತಾರ್ಹ ನಿರ್ಧಾರ. ರಾಷ್ಟ್ರಗೀತೆ ಹಾಡುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಷಯ. ಇದು ಇಡೀ ರಾಷ್ಟ್ರಕ್ಕೆ ಅನ್ವಯವಾಗಬೇಕು ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search