• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2022ಕ್ಕೆ ರಾಮ ಮಂದಿರ, ರಾಮರಾಜ್ಯ ಕನಸು ಪೂರ್ಣ:ಯೋಗಿ ಆದಿತ್ಯನಾಥ

TNN Correspondent Posted On November 13, 2017
0


0
Shares
  • Share On Facebook
  • Tweet It

ಲಖನೌ: ಹಿಂದೂಸ್ತಾನದಲ್ಲಿ ಶೀಘ್ರದಲ್ಲಿ ರಾಮರಾಜ್ಯದ ಕನಸು ಪೂರ್ಣಗೊಳ್ಳಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದು, ಪರೋಕ್ಷವಾಗಿ 2022ರ ಹೊತ್ತಿಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯವೂ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.0

‘ಹಿಂದೂಸ್ತಾನ ಶಿಖರ ಸಂಗಮ’ ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ ‘ಕನಸುಗಳು ಸದಾ ವಾಸ್ತವವಾಗಿರುತ್ತವೆ ಎಂದು ಯೋಗಿ ಹೇಳಿದ್ದು. ನನ್ನ ಗುರುಗಳಾದ ಮಹಾಂತ ಅವೈಧ್ಯನಾಥರ ಕನಸು ಪೂರ್ಣಗೊಳಿಸಬೇಕಿದೆ ಎಂದು ಹೇಳಿದರು. ಮಹಾಂತ ಅವೈಧ್ಯ ನಾಥರು ರಾಮಮಂದಿರ ಹೋರಾಟದಲ್ಲಿ ಸಕ್ರೀಯರಾಗಿದ್ದು ಗಮನಾರ್ಹ.

ಇನ್ನು 2022ರ ವೇಳೆಗೆ ಭಾರತದಲ್ಲಿ ಅರಾಜಕತೆ, ಬಡತನ ಹೋಗಲಾಡಿಸುವ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹೊಂದಿದ್ದಾರೆ. ಅವರ ದೂರದೃಷ್ಟಿಗೆ ಪೂರಕ ಮತ್ತು ರಾಮರಾಜ್ಯದ ಕನಸಿಗೆ ಪೂಕರ ಕಾರ್ಯಗಳನ್ನು ಹಮ್ಮಿಕೊಳ್ಳಬೇಕಿದೆ. ಇನ್ನು ರಾಮಮಂದಿರ ನಿರ್ಮಾಣ ಕುರಿತು ಸಂಕಲ್ಪ ಮತ್ತು ಸಿದ್ಧಿ ಮಾಡಲಾಗಿದೆ. ಆ ನಿಟ್ಟಿನಲ್ಲಿ ನಿತ್ಯ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.

ನಮ್ಮ ಗುರಿ ಸ್ವಚ್ಛ ಮತ್ತು ಸ್ವಸ್ಥವಾಗಿದ್ದರೇ ದೇವರು ನಮ್ಮ ಬೆಂಬಲಕ್ಕೆ ನಿಲ್ಲುತ್ತಾನೆ. ಇನ್ನು ಸ್ಪಷ್ಟ ಮತ್ತು ಸ್ವಚ್ಛ ಗುರಿ ಹೊಂದಿರುವ ಯೋಗಿಯೊಬ್ಬನಿಗೆ ಅಸಾಧ್ಯವಾದದ್ದು ಯಾವುದು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾವು ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಶ್ರಮಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ನಾವು ಅಯೋಧ್ಯ ಹೋರಾಟದಿಂದಲೂ ಸೂಕ್ತ ಶ್ರಮವಹಿಸಿದ್ದೇವೆ. ನಾವು ಅಯೋಧ್ಯೆಗೆ ನೀಡಿದಷ್ಟೇ ಮಹತ್ವವನ್ನು ಆಗ್ರಾದ ತಾಜಮಹಲ್ ಅಭಿವೃದ್ಧಿಗೂ ನೀಡುತ್ತಿದ್ದೇವೆ. ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search