• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

21 ಶತಮಾನ ನಮ್ಮದಾಗಿಸಿಕೊಳ್ಳಲು ಎಲ್ಲರೂ ಶ್ರಮಿಸೋಣ: ಪ್ರಧಾನಿ ಮೋದಿ ಕರೆ

TNN Correspondent Posted On November 14, 2017
0


0
Shares
  • Share On Facebook
  • Tweet It

ಮನಿಲಾ: ಇಪ್ಪತ್ತೊಂದನೇ ಶತಮಾನವನ್ನು ಭಾರತದ್ದನ್ನಾಗಿಸಿಕೊಳ್ಳಲು ಎಲ್ಲರೂ ಶ್ರಮಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಫಿಲಿಪ್ಪೈನ್ಸ್ ನಲ್ಲಿ ಆಸಿಯನ್ ಶೃಂಗಸಭೆ ಬಳಿಕ ನಡೆದ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಈ ದಿಸೆಯಲ್ಲಿಯೇ ಕೇಂದ್ರ ಸರ್ಕಾರ ಶ್ರಮಿಸುತ್ತಿದ್ದು, ಅಭಿವೃದ್ಧಿಯಲ್ಲಿ ದೇಶವನ್ನು ರೂಪಾಂತರಗೊಳಿಸುವುದೇ ನಮ್ಮ ಬದ್ಧತೆ ಎಂದು ತಿಳಿಸಿದ್ದಾರೆ.

ಈ ಹಾದಿಯಲ್ಲಿ ನಮಗೆ ಹಲವು ಸವಾಲುಗಳು ಎದುರಾಗಬಹುದು. ಕಲ್ಲು-ಮುಳ್ಳುಗಳೇ ಅಡ್ಡಿಯಾಗಬಹುದು. ಆದರೆ ನಾವು ಇದಾವುದಕ್ಕೂ ಜಗ್ಗದೆ, ಮುನ್ನುಗ್ಗೋಣ. 21ನೇ ಶತಮಾನವನ್ನು ನಮ್ಮದಾಗಿಸಿಕೊಳ್ಳೋಣ ಎಂದರು.

ಅದಕ್ಕಾಗಿ ನಮ್ಮ ಸರ್ಕಾರ ಬದ್ಧವಾಗಿದ್ದು, ಹಲವು ಮಹತ್ತರ ಹೆಜ್ಜೆ ಇಟ್ಟಿದೆ. ದೇಶದ ಯಾರಿಗೂ ಸ್ವಚ್ಛತೆಯ ಕಲ್ಪನೆಯಿರಲಿಲ್ಲ. ಅಂಥಾದ್ದೊಂದು ಕಲ್ಪನೆಯನ್ನು ಮಹಾತ್ಮ ಗಾಂಧೀಜಿಯವರು ಬಿಟ್ಟು ಹೋಗಿದ್ದರು. ಆದರೆ ನಾವು ಸ್ವಚ್ಛ ಭಾರತ ಅಭಿಯಾನ ಆರಂಭಿಸಿದೆವು ನೋಡಿ, ದೇಶದ 2.25 ಲಕ್ಷ ಕುಟುಂಬಗಳು ಬಯಲು ಶೌಚಮುಕ್ತ ಗ್ರಾಮಗಳಾಗಿವೆ. ನಮ್ಮ ಜನಧನ್, ಉಜ್ವಲ ಯೋಜನೆಗಳು ದೇಶದ ರೂಪಾಂತರಕ್ಕಾಗಿಯೇ ರೂಪಿಸಲಾಗಿದೆ ಎಂದು ತಿಳಿಸಿದರು.

ಮೂರು ದಿನಗಳ ಆಸಿಯನ್ ಶೃಂಗಸಭೆ ಹಿನ್ನೆಲೆ ಮೋದಿ ಭಾನುವಾರ ಫಿಲಿಪ್ಪೈನ್ಸ್ ತಲುಪಿದ್ದು, ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search