• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

21 ಶತಮಾನ ನಮ್ಮದಾಗಿಸಿಕೊಳ್ಳಲು ಎಲ್ಲರೂ ಶ್ರಮಿಸೋಣ: ಪ್ರಧಾನಿ ಮೋದಿ ಕರೆ

TNN Correspondent Posted On November 14, 2017
0


0
Shares
  • Share On Facebook
  • Tweet It

ಮನಿಲಾ: ಇಪ್ಪತ್ತೊಂದನೇ ಶತಮಾನವನ್ನು ಭಾರತದ್ದನ್ನಾಗಿಸಿಕೊಳ್ಳಲು ಎಲ್ಲರೂ ಶ್ರಮಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಫಿಲಿಪ್ಪೈನ್ಸ್ ನಲ್ಲಿ ಆಸಿಯನ್ ಶೃಂಗಸಭೆ ಬಳಿಕ ನಡೆದ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಈ ದಿಸೆಯಲ್ಲಿಯೇ ಕೇಂದ್ರ ಸರ್ಕಾರ ಶ್ರಮಿಸುತ್ತಿದ್ದು, ಅಭಿವೃದ್ಧಿಯಲ್ಲಿ ದೇಶವನ್ನು ರೂಪಾಂತರಗೊಳಿಸುವುದೇ ನಮ್ಮ ಬದ್ಧತೆ ಎಂದು ತಿಳಿಸಿದ್ದಾರೆ.

ಈ ಹಾದಿಯಲ್ಲಿ ನಮಗೆ ಹಲವು ಸವಾಲುಗಳು ಎದುರಾಗಬಹುದು. ಕಲ್ಲು-ಮುಳ್ಳುಗಳೇ ಅಡ್ಡಿಯಾಗಬಹುದು. ಆದರೆ ನಾವು ಇದಾವುದಕ್ಕೂ ಜಗ್ಗದೆ, ಮುನ್ನುಗ್ಗೋಣ. 21ನೇ ಶತಮಾನವನ್ನು ನಮ್ಮದಾಗಿಸಿಕೊಳ್ಳೋಣ ಎಂದರು.

ಅದಕ್ಕಾಗಿ ನಮ್ಮ ಸರ್ಕಾರ ಬದ್ಧವಾಗಿದ್ದು, ಹಲವು ಮಹತ್ತರ ಹೆಜ್ಜೆ ಇಟ್ಟಿದೆ. ದೇಶದ ಯಾರಿಗೂ ಸ್ವಚ್ಛತೆಯ ಕಲ್ಪನೆಯಿರಲಿಲ್ಲ. ಅಂಥಾದ್ದೊಂದು ಕಲ್ಪನೆಯನ್ನು ಮಹಾತ್ಮ ಗಾಂಧೀಜಿಯವರು ಬಿಟ್ಟು ಹೋಗಿದ್ದರು. ಆದರೆ ನಾವು ಸ್ವಚ್ಛ ಭಾರತ ಅಭಿಯಾನ ಆರಂಭಿಸಿದೆವು ನೋಡಿ, ದೇಶದ 2.25 ಲಕ್ಷ ಕುಟುಂಬಗಳು ಬಯಲು ಶೌಚಮುಕ್ತ ಗ್ರಾಮಗಳಾಗಿವೆ. ನಮ್ಮ ಜನಧನ್, ಉಜ್ವಲ ಯೋಜನೆಗಳು ದೇಶದ ರೂಪಾಂತರಕ್ಕಾಗಿಯೇ ರೂಪಿಸಲಾಗಿದೆ ಎಂದು ತಿಳಿಸಿದರು.

ಮೂರು ದಿನಗಳ ಆಸಿಯನ್ ಶೃಂಗಸಭೆ ಹಿನ್ನೆಲೆ ಮೋದಿ ಭಾನುವಾರ ಫಿಲಿಪ್ಪೈನ್ಸ್ ತಲುಪಿದ್ದು, ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search