• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2019ರ ವೇಳೆಗೆ ಜಗತ್ತಿನ ಐದನೇ, 2028ರ ವೇಳಗೆ ಮೂರನೇ ಅತಿದೊಡ್ಡ ರಾಷ್ಟ್ರವಾಗಲಿದೆ ಭಾರತ

TNN Correspondent Posted On November 14, 2017
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ಭಾರತದ ಆರ್ಥಿಕತೆ ಸುಧಾರಣೆ ಕಾಣುತ್ತಿರುವ ಬೆನ್ನಲ್ಲೇ, ಅಮೆರಿಕದ ಬ್ರೋಕರೇಜ್ ಎಂಬ ಸಂಸ್ಥೆಯೊಂದು “ಇಂಡಿಯಾ 2028:ದಿ ಲಾಸ್ಟ್ ಬ್ರಿಕ್ ಇನ್ ದಿ ವಾಲ್” ಎಂಬ ವರದಿ ಬಿಡುಗಡೆ ಮಾಡಿದ್ದು, ಭಾರತ 2019ರ ವೇಳೆಗೆ ಜಗತ್ತಿನ ಐದನೇ, 2028ರ ವೇಳಗೆ ಮೂರನೇ ಅತಿದೊಡ್ಡ ರಾಷ್ಟ್ರವಾಗಲಿದೆ ಎಂದು ತಿಳಿಸಿದೆ.

ಭಾರತದ ಒಟ್ಟು ರಾಷ್ಟ್ರೀಯ ಉತ್ಪನ್ನದಲ್ಲಿ ಗಣನೀಯ ಏರಿಕೆಯಾಗಲಿದ್ದು, ಈಗಾಗಲೇ ಭಾರತ ಬ್ರೆಜಿಲ್ ಹಾಗೂ ರಷ್ಯಾವನ್ನು ಜಿಡಿಪಿಯಲ್ಲಿ ಹಿಂದಿಕ್ಕಿದೆ. ಇನ್ನೇನು ಎರಡೇ ವರ್ಷದಲ್ಲಿ ಫ್ರಾನ್ಸ್ ಹಾಗೂ ಬ್ರಿಟನ್ ಅನ್ನು ಹಿಂದಿಕ್ಕಿ ಭಾರತ ಜಗತ್ತಿನ ಮೂರನೇ ಅತಿದೊಡ್ಡ ಅರ್ಥವ್ಯವಸ್ಥೆಯ ರಾಷ್ಟ್ರ ಎಂಬ ಖ್ಯಾತಿಗೆ ಭಾಜನವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮುಂದಿನ ಒಂದು ದಶಕದಲ್ಲಿ ಭಾರತದ ಆರ್ಥಿಕತೆ ಶೇ.10ರಷ್ಟು ಹೆಚ್ಚಾಗಲಿದೆ. ಈ ದರ ಜಪಾನ್ ಗಿಂತ 1.6ರಷ್ಟು ಹೆಚ್ಚಾಗುತ್ತದೆ. ಅಲ್ಲದೆ ಜರ್ಮನಿಯ ಆರ್ಥಿಕತೆಯನ್ನೂ ಭಾರತ ಹಿಂದಿಕ್ಕಲಿದ್ದು, 2028ರ ವೇಳಗೆ ಈ ಎರಡೂ ರಾಷ್ಟ್ರಗಳನ್ನು ಬದಿಗೊತ್ತಿ, ಭಾರತ ಜಿಡಿಪಿ ದರದಲ್ಲಿ ಜಗತ್ತಿನ ಮೂರನೇ ದೊಡ್ಡ ರಾಷ್ಟ್ರವಾಗಲಿದೆ ಎಂದು ತಿಳಿದುಬಂದಿದೆ.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜಾರಿಗೊಳಿಸಿದ ಜಿಎಸ್ಟಿ ಹಾಗೂ ನೋಟು ನಿಷೇಧದಿಂದ ದೇಶದ ಅರ್ಥವ್ಯವಸ್ಥೆಯೇ ಬುಡಮೇಲಾಯಿತು ಎಂದು ದೇಶದಲ್ಲಿ ಬೊಬ್ಬೆ ಹಾಕುತ್ತಿದ್ದರೂ, ಜಗತ್ತಿನ ಪ್ರಮುಖ ಸಂಸ್ಥೆಗಳು ದೇಶದ ವಿತ್ತ ವ್ಯವಸ್ಥೆಯ ಸುಧಾರಣೆ ಬಗ್ಗೆ ಮಾತನಾಡುತ್ತಿವೆ. ನಮ್ಮವರಿಗೆ ಇದು ಅರ್ಥವಾಗೋದು ಯಾವಾಗ ಎಂಬುದೇ ಪ್ರಶ್ನೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search