• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರವಿಂದ್ ಕೇಜ್ರಿವಾಲರನ್ನು ಭೇಟಿಯಾಗಲು ಸಮಯವಿಲ್ಲ ಎಂದ ಪಂಜಾಬ್ ಮುಖ್ಯಮಂತ್ರಿ!

TNN Correspondent Posted On November 15, 2017
0


0
Shares
  • Share On Facebook
  • Tweet It

ಚಂಡೀಗಡ: ದೆಹಲಿಯಲ್ಲಿ ವಾಯುಮಾಲಿನ್ಯದ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಘೋಷಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮಸ್ಯೆ ನಿವಾರಣೆಗೆ ಪ್ರಯತ್ನಿಸುತ್ತಿದ್ದು, ಈ ಕುರಿತು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಭೇಟಿ ಮಾಡಲು ಪ್ರಸ್ತಾಪಿಸಿದ್ದರು.

ಆದರೆ ಇದಕ್ಕೆ ಸೊಪ್ಪು ಹಾಕದ ಅಮರಿಂದರ್ ಸಿಂಗ್, ಅರವಿಂದ್ ಕೇಜ್ರಿವಾಲರನ್ನು ಭೇಟಿಯಾಗುವಷ್ಟು ಸಮಯ ನನ್ನ ಬಳಿ ಇಲ್ಲ ಎಂದು ಛೇಡಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಪಂಜಾಬ್ ಮುಖ್ಯಮಂತ್ರಿ, ಅರವಿಂದ್ ಕೇಜ್ರಿವಾಲ್ ಅವರು ವಾಯುಮಾಲಿನ್ಯ ವಿಷಯದಲ್ಲೂ ರಾಜಕೀಯ ಬೆರೆಸಲು ಮುಂದಾಗಿದ್ದಾರೆ. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾದರೆ ಪಂಜಾಬಿನ ರೈತರು ಗದ್ದೆಯಲ್ಲಿ ಭತ್ತದ ತ್ಯಾಜ್ಯ ಸುಡಬಾರದು ಎನ್ನುತ್ತಾರೆ. ಹೀಗೆ ರಾಜಕೀಯ ಬೆರೆಸುತ್ತಿರುವ ಕಾರಣ ಹಾಗೂ ನನ್ನ ಬಳಿ ಅವರನ್ನು ಭೇಟಿಯಾಗಲು ಸಮಯವಿಲ್ಲದ ಕಾರಣ ಭೇಟಿಮಾಡಲಾಗುವುದಿಲ್ಲ ಎಂದು ಖಡಾಖಡಿಯಾಗಿ ಹೇಳಿದ್ದಾರೆ.

ದೆಹಲಿ ಹಾಗೂ ಪಂಜಾಬಿನಲ್ಲಿ ನಗರವಾಸಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಅದರಲ್ಲೂ ದೆಹಲಿಯಲ್ಲಿ ಸಾರಿಗೆ ವ್ಯವಸ್ಥೆಯ ಲೋಪದಿಂದ ವಾಯುಮಾಲಿನ್ಯ ಹೆಚ್ಚಾಗಿದೆ. ಆದರೆ ಇದನ್ನು ತಡೆಯುವಲ್ಲಿ ವಿಫಲವಾಗಿರುವ ಅರವಿಂದ ಕೇಜ್ರಿವಾಲ್ ವಿಷಯ ಬೇರೆಡೆ ವಾಲಿಸಲು ಭತ್ತ ಸುಡದಂತೆ ಹಾಗೂ ನಮ್ಮನ್ನು ಭೇಟಿ ಮಾಡುವಂತೆ ಪ್ರಸ್ತಾಪಿಸಿದ್ದಾರೆ ಎಂದು ಸಿಂಗ್ ಆರೋಪಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search