• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರವಿಂದ್ ಕೇಜ್ರಿವಾಲರನ್ನು ಭೇಟಿಯಾಗಲು ಸಮಯವಿಲ್ಲ ಎಂದ ಪಂಜಾಬ್ ಮುಖ್ಯಮಂತ್ರಿ!

TNN Correspondent Posted On November 15, 2017
0


0
Shares
  • Share On Facebook
  • Tweet It

ಚಂಡೀಗಡ: ದೆಹಲಿಯಲ್ಲಿ ವಾಯುಮಾಲಿನ್ಯದ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಘೋಷಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮಸ್ಯೆ ನಿವಾರಣೆಗೆ ಪ್ರಯತ್ನಿಸುತ್ತಿದ್ದು, ಈ ಕುರಿತು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಭೇಟಿ ಮಾಡಲು ಪ್ರಸ್ತಾಪಿಸಿದ್ದರು.

ಆದರೆ ಇದಕ್ಕೆ ಸೊಪ್ಪು ಹಾಕದ ಅಮರಿಂದರ್ ಸಿಂಗ್, ಅರವಿಂದ್ ಕೇಜ್ರಿವಾಲರನ್ನು ಭೇಟಿಯಾಗುವಷ್ಟು ಸಮಯ ನನ್ನ ಬಳಿ ಇಲ್ಲ ಎಂದು ಛೇಡಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಪಂಜಾಬ್ ಮುಖ್ಯಮಂತ್ರಿ, ಅರವಿಂದ್ ಕೇಜ್ರಿವಾಲ್ ಅವರು ವಾಯುಮಾಲಿನ್ಯ ವಿಷಯದಲ್ಲೂ ರಾಜಕೀಯ ಬೆರೆಸಲು ಮುಂದಾಗಿದ್ದಾರೆ. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾದರೆ ಪಂಜಾಬಿನ ರೈತರು ಗದ್ದೆಯಲ್ಲಿ ಭತ್ತದ ತ್ಯಾಜ್ಯ ಸುಡಬಾರದು ಎನ್ನುತ್ತಾರೆ. ಹೀಗೆ ರಾಜಕೀಯ ಬೆರೆಸುತ್ತಿರುವ ಕಾರಣ ಹಾಗೂ ನನ್ನ ಬಳಿ ಅವರನ್ನು ಭೇಟಿಯಾಗಲು ಸಮಯವಿಲ್ಲದ ಕಾರಣ ಭೇಟಿಮಾಡಲಾಗುವುದಿಲ್ಲ ಎಂದು ಖಡಾಖಡಿಯಾಗಿ ಹೇಳಿದ್ದಾರೆ.

ದೆಹಲಿ ಹಾಗೂ ಪಂಜಾಬಿನಲ್ಲಿ ನಗರವಾಸಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಅದರಲ್ಲೂ ದೆಹಲಿಯಲ್ಲಿ ಸಾರಿಗೆ ವ್ಯವಸ್ಥೆಯ ಲೋಪದಿಂದ ವಾಯುಮಾಲಿನ್ಯ ಹೆಚ್ಚಾಗಿದೆ. ಆದರೆ ಇದನ್ನು ತಡೆಯುವಲ್ಲಿ ವಿಫಲವಾಗಿರುವ ಅರವಿಂದ ಕೇಜ್ರಿವಾಲ್ ವಿಷಯ ಬೇರೆಡೆ ವಾಲಿಸಲು ಭತ್ತ ಸುಡದಂತೆ ಹಾಗೂ ನಮ್ಮನ್ನು ಭೇಟಿ ಮಾಡುವಂತೆ ಪ್ರಸ್ತಾಪಿಸಿದ್ದಾರೆ ಎಂದು ಸಿಂಗ್ ಆರೋಪಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search