• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರವಿಂದ್ ಕೇಜ್ರಿವಾಲರನ್ನು ಭೇಟಿಯಾಗಲು ಸಮಯವಿಲ್ಲ ಎಂದ ಪಂಜಾಬ್ ಮುಖ್ಯಮಂತ್ರಿ!

TNN Correspondent Posted On November 15, 2017
0


0
Shares
  • Share On Facebook
  • Tweet It

ಚಂಡೀಗಡ: ದೆಹಲಿಯಲ್ಲಿ ವಾಯುಮಾಲಿನ್ಯದ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಘೋಷಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮಸ್ಯೆ ನಿವಾರಣೆಗೆ ಪ್ರಯತ್ನಿಸುತ್ತಿದ್ದು, ಈ ಕುರಿತು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಭೇಟಿ ಮಾಡಲು ಪ್ರಸ್ತಾಪಿಸಿದ್ದರು.

ಆದರೆ ಇದಕ್ಕೆ ಸೊಪ್ಪು ಹಾಕದ ಅಮರಿಂದರ್ ಸಿಂಗ್, ಅರವಿಂದ್ ಕೇಜ್ರಿವಾಲರನ್ನು ಭೇಟಿಯಾಗುವಷ್ಟು ಸಮಯ ನನ್ನ ಬಳಿ ಇಲ್ಲ ಎಂದು ಛೇಡಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಪಂಜಾಬ್ ಮುಖ್ಯಮಂತ್ರಿ, ಅರವಿಂದ್ ಕೇಜ್ರಿವಾಲ್ ಅವರು ವಾಯುಮಾಲಿನ್ಯ ವಿಷಯದಲ್ಲೂ ರಾಜಕೀಯ ಬೆರೆಸಲು ಮುಂದಾಗಿದ್ದಾರೆ. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾದರೆ ಪಂಜಾಬಿನ ರೈತರು ಗದ್ದೆಯಲ್ಲಿ ಭತ್ತದ ತ್ಯಾಜ್ಯ ಸುಡಬಾರದು ಎನ್ನುತ್ತಾರೆ. ಹೀಗೆ ರಾಜಕೀಯ ಬೆರೆಸುತ್ತಿರುವ ಕಾರಣ ಹಾಗೂ ನನ್ನ ಬಳಿ ಅವರನ್ನು ಭೇಟಿಯಾಗಲು ಸಮಯವಿಲ್ಲದ ಕಾರಣ ಭೇಟಿಮಾಡಲಾಗುವುದಿಲ್ಲ ಎಂದು ಖಡಾಖಡಿಯಾಗಿ ಹೇಳಿದ್ದಾರೆ.

ದೆಹಲಿ ಹಾಗೂ ಪಂಜಾಬಿನಲ್ಲಿ ನಗರವಾಸಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಅದರಲ್ಲೂ ದೆಹಲಿಯಲ್ಲಿ ಸಾರಿಗೆ ವ್ಯವಸ್ಥೆಯ ಲೋಪದಿಂದ ವಾಯುಮಾಲಿನ್ಯ ಹೆಚ್ಚಾಗಿದೆ. ಆದರೆ ಇದನ್ನು ತಡೆಯುವಲ್ಲಿ ವಿಫಲವಾಗಿರುವ ಅರವಿಂದ ಕೇಜ್ರಿವಾಲ್ ವಿಷಯ ಬೇರೆಡೆ ವಾಲಿಸಲು ಭತ್ತ ಸುಡದಂತೆ ಹಾಗೂ ನಮ್ಮನ್ನು ಭೇಟಿ ಮಾಡುವಂತೆ ಪ್ರಸ್ತಾಪಿಸಿದ್ದಾರೆ ಎಂದು ಸಿಂಗ್ ಆರೋಪಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!

  • Privacy Policy
  • Contact
© Tulunadu Infomedia.

Press enter/return to begin your search