• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಥಾಮಸ್ ಚಾಂಡಿ ರಾಜೀನಾಮೆ, ಕಮ್ಯುನಿಸ್ಟ್ ಸರ್ಕಾರದ ಮೂರನೇ ವಿಕೆಟ್ ಪತನ

TNN Correspondent Posted On November 16, 2017
0


0
Shares
  • Share On Facebook
  • Tweet It

ತಿರುವನಂತರಪುರ: ಕೇರಳದ ಅಳಪ್ಪುಳದ ಲೇಕ್ ಪ್ಯಾಲೆಸ್ ರೆಸಾರ್ಟ್ ಗಾಗಿ ಅಕ್ರಮವಾಗಿ ಭೂಮಿ ವಶಪಡಿಸಿಕೊಂಡಿದ್ದಲ್ಲದೇ, ಭತ್ತದ ಗದ್ದೆಗಳ ಮೂಲಕ ರಸ್ತೆ ನಿರ್ಮಿಸಿದ ಹಗರಣದ ಆರೋಪ ಹೊತ್ತಿದ್ದ ಕಮ್ಯುನಿಸ್ಟ್ ಸರ್ಕಾರದ ಸಚಿವ ಥಾಮಸ್ ಚಾಂಡಿ ಕೊನೆಗೂ ರಾಜೀನಾಮೆ ನೀಡಿದ್ದಾರೆ.

ಆರೋಪ ಕೇಳಿಬಂಧ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸುವಂತೆ ಕಳೆದ ವಾರ ವಿಚಾರಣಾ ನ್ಯಾಯಾಲಯ ತಿಳಿಸಿತ್ತು. ಹಗರಣದ ಕುರಿತು ಅಳಪ್ಪುಳ ಜಿಲ್ಲಾಧಿಕಾರಿ ವರದಿ ಸಲ್ಲಿಸಿದ್ದರು.

ವರದಿ ಪರಿಶೀಲಿಸಿದ ಕೇರಳ ಹೈಕೋರ್ಟ್, ಹಗರಣ ಆರೋಪ ಹೊತ್ತಿರುವ ನೀವು ಅಧಿಕಾರದಲ್ಲಿ ಮುಂದುವರಿಯುವುದು ಎಷ್ಟು ಸರಿ ಎಂದು ಛೀಮಾರಿ ಹಾಕಿತ್ತು.

ಇದರಿಂದ ಮುಜುಗರಕ್ಕೀಡಾದ ಚಾಂಡಿ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜತೆ ಚರ್ಚಿಸಿ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇನೆ. ಆರೋಪಮುಕ್ತನಾಗಿಯೇ ಮರಳುತ್ತೇನೆ ಎಂದು ಚಾಂಡಿ ತಿಳಿಸಿದ್ದಾರೆ.

ಸಂಬಂಧಿಕರಿಗೆ ಹುದ್ದೆ ನೀಡಿದ್ದ ಜಯರಾಜನ್, ಲೈಂಗಿಕ ಹಗರಣದಲ್ಲಿ ಎ.ಕೆ.ಶಶೀಂದ್ರನ್ ಹಿಂದೆ ರಾಜೀನಾಮೆ ನೀಡಿದ್ದರು. ಈಗ ಸಾರಿಗೆ ಸಚಿವ ಥಾಮಸ್ ಚಾಂಡಿ ಹಗರಣದಲ್ಲಿ ಸಿಲುಕಿ ರಾಜೀನಾಮೆ ನೀಡುವ ಮೂಲಕ ಕಮ್ಯುನಿಸ್ಟ್ ಸರ್ಕಾರದ ಮೂರನೇ ವಿಕೆಟ್ ಪತನ ಎಂಬ ಕುಖ್ಯಾತಿಗೆ ಭಾಜನರಾಗಿದ್ದಾರೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search