• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಥಾಮಸ್ ಚಾಂಡಿ ರಾಜೀನಾಮೆ, ಕಮ್ಯುನಿಸ್ಟ್ ಸರ್ಕಾರದ ಮೂರನೇ ವಿಕೆಟ್ ಪತನ

TNN Correspondent Posted On November 16, 2017


  • Share On Facebook
  • Tweet It

ತಿರುವನಂತರಪುರ: ಕೇರಳದ ಅಳಪ್ಪುಳದ ಲೇಕ್ ಪ್ಯಾಲೆಸ್ ರೆಸಾರ್ಟ್ ಗಾಗಿ ಅಕ್ರಮವಾಗಿ ಭೂಮಿ ವಶಪಡಿಸಿಕೊಂಡಿದ್ದಲ್ಲದೇ, ಭತ್ತದ ಗದ್ದೆಗಳ ಮೂಲಕ ರಸ್ತೆ ನಿರ್ಮಿಸಿದ ಹಗರಣದ ಆರೋಪ ಹೊತ್ತಿದ್ದ ಕಮ್ಯುನಿಸ್ಟ್ ಸರ್ಕಾರದ ಸಚಿವ ಥಾಮಸ್ ಚಾಂಡಿ ಕೊನೆಗೂ ರಾಜೀನಾಮೆ ನೀಡಿದ್ದಾರೆ.

ಆರೋಪ ಕೇಳಿಬಂಧ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸುವಂತೆ ಕಳೆದ ವಾರ ವಿಚಾರಣಾ ನ್ಯಾಯಾಲಯ ತಿಳಿಸಿತ್ತು. ಹಗರಣದ ಕುರಿತು ಅಳಪ್ಪುಳ ಜಿಲ್ಲಾಧಿಕಾರಿ ವರದಿ ಸಲ್ಲಿಸಿದ್ದರು.

ವರದಿ ಪರಿಶೀಲಿಸಿದ ಕೇರಳ ಹೈಕೋರ್ಟ್, ಹಗರಣ ಆರೋಪ ಹೊತ್ತಿರುವ ನೀವು ಅಧಿಕಾರದಲ್ಲಿ ಮುಂದುವರಿಯುವುದು ಎಷ್ಟು ಸರಿ ಎಂದು ಛೀಮಾರಿ ಹಾಕಿತ್ತು.

ಇದರಿಂದ ಮುಜುಗರಕ್ಕೀಡಾದ ಚಾಂಡಿ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜತೆ ಚರ್ಚಿಸಿ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇನೆ. ಆರೋಪಮುಕ್ತನಾಗಿಯೇ ಮರಳುತ್ತೇನೆ ಎಂದು ಚಾಂಡಿ ತಿಳಿಸಿದ್ದಾರೆ.

ಸಂಬಂಧಿಕರಿಗೆ ಹುದ್ದೆ ನೀಡಿದ್ದ ಜಯರಾಜನ್, ಲೈಂಗಿಕ ಹಗರಣದಲ್ಲಿ ಎ.ಕೆ.ಶಶೀಂದ್ರನ್ ಹಿಂದೆ ರಾಜೀನಾಮೆ ನೀಡಿದ್ದರು. ಈಗ ಸಾರಿಗೆ ಸಚಿವ ಥಾಮಸ್ ಚಾಂಡಿ ಹಗರಣದಲ್ಲಿ ಸಿಲುಕಿ ರಾಜೀನಾಮೆ ನೀಡುವ ಮೂಲಕ ಕಮ್ಯುನಿಸ್ಟ್ ಸರ್ಕಾರದ ಮೂರನೇ ವಿಕೆಟ್ ಪತನ ಎಂಬ ಕುಖ್ಯಾತಿಗೆ ಭಾಜನರಾಗಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search