• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪರಿಸರ ರಕ್ಷಣೆಗೆ ಕೇಜ್ರಿವಾಲ್ ಸರ್ಕಾರ ಪಡೆದಿದ್ದು 787 ಕೋಟಿ ರುಪಾಯಿ, ಖರ್ಚು ಮಾಡಿದ್ದು ಬರೀ 93 ಲಕ್ಷ!

TNN Correspondent Posted On November 16, 2017
0


0
Shares
  • Share On Facebook
  • Tweet It

ದೆಹಲಿ: ಯಾವಾಗ ಹಸಿರು ನ್ಯಾಯಾಧಿಕರಣ ದೆಹಲಿಯಲ್ಲಿ ವಾಯುಮಾಲಿನ್ಯ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ಘೋಷಣೆ ಮಾಡಿತೋ, ಅಲ್ಲಿಂದ ದಿಢೀರನೆ ಎಚ್ಚೆತ್ತುಕೊಂಡವರ ಹೆಸರು ಅರವಿಂದ್ ಕೇಜ್ರಿವಾಲ್.

ಹೌದು, ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಘೋಷಣೆಯಾದ ಬಳಿಕ ಕೇಜ್ರಿವಾಲ್, ಹರಿಯಾಣ, ಪಂಜಾಬ್ ಗಳಲ್ಲಿ ರೈತರು ಭತ್ತದ ತ್ಯಾಜ್ಯ ಸುಡಬಾರದು ಎಂದರು. ಎರಡೂ ರಾಜ್ಯಗಳ ಮುಖ್ಯಮಂತ್ರಿ ಜತೆ ಮಾತನಾಡುವೆ ಎಂದು ಪರಿಸರ ಕಾಳಜಿ ತೋರಿಸಿದರು.

ಆದರೆ, ದೆಹಲಿ ಸರ್ಕಾರ ಪರಿಸರ ರಕ್ಷಣೆಗೆ ಪ್ರಸಕ್ತ ವರ್ಷದಲ್ಲಿ ಜನರಿಂದ ಪಡೆದ ತೆರಿಗೆ ಹಣ 787 ಕೋಟಿ ರೂಪಾಯಿ. ಪರಿಸರ ರಕ್ಷಣೆಗೆ ಇಷ್ಟೆಲ್ಲ ಮಾತನಾಡುವ ಸರ್ಕಾರ ಖರ್ಚು ಮಾಡಿದ್ದು ಮಾತ್ರ ಬರೀ 93 ಲಕ್ಷ ರೂಪಾಯಿ ಎಂದರೆ ನಂಬಲೇಬೇಕು.

ಸಂಜೀವ್ ಜೈನ್ ಎಂಬ ಆರ್ ಟಿಐ ಕಾರ್ಯಕರ್ತ ಮಾಹಿತಿ ಹಕ್ಕು ಕಾಯಿದೆ ಅನ್ವಯ ಪಡೆದ ದಾಖಲೆ ಪ್ರಕಾರ, ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರ 2015ರಲ್ಲಿ 50 ಕೋಟಿ ರುಪಾಯಿ, 2016ರಲ್ಲಿ 387 ಹಾಗೂ ಪ್ರಸಕ್ತ ವರ್ಷದ ಜನವರಿಯಿಂದ ಸೆ.1ರವರೆಗೆ ಬರೋಬ್ಬರಿ 787 ಕೋಟಿ ರೂಪಾಯಿ ಪರಿಸರ ಶುಲ್ಕ ಸಂಗ್ರಹಿಸಿದೆ. ಆದರೆ ಅದರಲ್ಲಿ ಖರ್ಚು ಮಾಡಿದ್ದು ಮಾತ್ರ 93 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.

2007ರಲ್ಲಿ ಪರಿಸರ ರಕ್ಷಣೆಗೆ ಅಂದಿನ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಪರಿಸರ ಶುಲ್ಕ ತೆರಿಗೆ ಜಾರಿಗೊಳಿಸಿದ್ದರು. ಆದರೆ ಆಡಳಿತಕ್ಕೆ ಬಂದು ಮೂರು ವರ್ಷವಾದರೂ ಕೇಜ್ರಿವಾಲ್ ಸರ್ಕಾರ ತೆರಿಗೆ ಹಣ ಖರ್ಚು ಮಾಡದೇ ಬರೀ, ಮಾತಿನಲ್ಲೇ ಪರಿಸರ ರಕ್ಷಣೆ ಮಾಡುತ್ತಿರುವ ಪರಿಣಾಮವೇ ದೆಹಲಿಯಲ್ಲಿ ವಾಯುಮಾಲಿನ್ಯ ತುರ್ತು ಪರಿಸ್ಥಿತಿ ಎದುರಾಗಿದೆ ಎಂಬ ಮಾತು ಕೇಳಿಬರುತ್ತಿವೆ.

 

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search