• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಬಹುತೇಕ ಮುಸ್ಲಿಮರ ವಿರೋಧವಿಲ್ಲ: ಶ್ರೀ ಶ್ರೀ ರವಿಶಂಕರ್ ಗುರೂಜಿ

TNN Correspondent Posted On November 16, 2017
0


0
Shares
  • Share On Facebook
  • Tweet It

ಲಖನೌ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಬಹುತೇಕ ಮುಸ್ಲಿಮರ ಬೆಂಬಲವಿದ್ದು, ವಿರೋಧಿಸುತ್ತಿಲ್ಲ ಎಂದು ಅಧ್ಯಾತ್ಮ ಗುರು ಶ್ರೀ ಶ್ರೀ ರವಿಶಂಕರ್ ಗುರೂಜಿ ಹೇಳಿದ್ದಾರೆ.

ರಾಮಮಂದಿರ-ಬಾಬ್ರಿ ಮಸೀದಿ ನಿರ್ಮಾಣದ ಕುರಿತ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಭೇಟಿ ಮಾಡಲು ಉತ್ತರ ಪ್ರದೇಶಕ್ಕೆ ತೆರಳಿರುವ ಗುರೂಜಿ ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ್ದಾರೆ.

ಈ ಮಾತು ಕೆಲವು ಮುಸ್ಲಿಮರು ಒಪ್ಪುವುದಿಲ್ಲ ನಿಜ. ಆದರೆ ವಾಸ್ತವದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಅಯೋಧ್ಯೆಯ ಬಹತೇಕ ಮುಸ್ಲಿಮರು ವಿರೋಧ ವ್ಯಕ್ತಪಡಿಸುತ್ತಿಲ್ಲ ಎಂದಿದ್ದಾರೆ.

ಖಂಡಿತವಾಗಿಯೂ ವಿವಾದ ಬಗೆಹರಿಯದ ಕಾಲವಿತ್ತು. ಈಗಲೂ ಹಾಗೆಯೇ ಬಿಂಬಿಸಲಾಗುತ್ತಿದೆ. ಆದರೆ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಯುವಕರು ಹಾಗೂ ಮುಖಂಡರು ಮನಸ್ಸು ಮಾಡಿದರೆ ವಿವಾದವನ್ನು ಸರಳವಾಗಿ ಬಗೆಹರಿಸಬಹುದು ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಕಾರಾತ್ಮಕ ವಾತಾವರಣವಿದೆ. ಜನ ವಿವಾದದಿಂದ ಮುಕ್ತಿ ಹೊಂದಲು ಬಯಸುತ್ತಿದ್ದಾರೆ. ಆದರೆ ವಿವಾದ ಬಗೆಹರಿಸುವುದು ಅಷ್ಟು ಸರಳ ಅಲ್ಲ ಎಂಬುದೂ ಗೊತ್ತಿದೆ. ಆದರೆ, ಎಲ್ಲರೊಂದಿಗೂ ಮಾತನಾಡಲು ನನಗೆ ಅವಕಾಶ ನೀಡಲಿ. ಆದಷ್ಟು ಬೇಗ ಸಮಸ್ಯಗೆ ಇತಿಶ್ರೀ ಹಾಡುವೆ ಎಂದು ಗುರೂಜಿ ಹೇಳಿದ್ದಾರೆ.

ರಾಮಮಂದಿರ-ಬಾಬ್ರಿ ಮಸೀದಿ ವಿಚಾರದಲ್ಲಿ ಹಿಂದೂ ಮುಸ್ಲಿಮರ ನಡುವೆ ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸುವುದಾಗಿ ರವಿಶಂಕರ್ ಗುರೂಜಿ ಹೇಳಿದ್ದಾಗ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬೇಡ ಎಂಬ ಮಾತನ್ನಾಡಿದ್ದರು. ಆದರೆ ಗುರೂಜಿ ಉತ್ತರಪ್ರದೇಶಕ್ಕೇ ತೆರಳಿದ್ದು, ವಿವಾದ ಬಗೆಹರಿಸಲು ಹಾಗೂ ರಾಮಮಂದಿರ ನಿರ್ಮಿಸಲು ಮುಸ್ಲಿಮರ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದ್ದು, ಸಕಾರಾತ್ಮಕ ಭಾವನೆ ಮೂಡಿಸಿದೆ. ಶೀಘ್ರವೇ ಅಯೋಧ್ಯೆಯಲ್ಲಿ ಶಾಂತಿಯುತವಾಗಿ ರಾಮಮಂದಿರ ನಿರ್ಮಾಣವಾಗಲಿ ಎಂಬುದೇ ಕೋಟ್ಯಂತರ ಹಿಂದೂಗಳ ಆಶಯವಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search