• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದ ಸಾಲ ನೀಡುವ ಆಫರ್ ತಿರಸ್ಕರಿಸಿ ಮಿತ್ರನಿಗೇ ಟಾಂಗ್ ನೀಡಿದ ಪಾಕಿಸ್ತಾನ

TNN Correspondent Posted On November 17, 2017
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಪಾಕಿಸ್ತಾನಕ್ಕೆ ಹಣಕಾಸು ನೆರವು, ಯೋಜನೆ ಹಾಗೂ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪಾಕಿಸ್ತಾನವನ್ನು ಬೆಂಬಲಿಸಿ ಸ್ನೇಹ ಗಳಿಸಿದ್ದ ಚೀನಾಕ್ಕೆ ಪಾಕಿಸ್ತಾನ ಟಾಂಗ್ ನೀಡಿದ್ದು, 14 ಶತಕೋಟಿ ಡಾಲರ್ ಹಣ ಸಾಲ ನೀಡುವುದಾಗಿ ಚೀನಾ ನೀಡಿದ ಆಫರ್ ಪಾಕಿಸ್ತಾನ ತಿರಸ್ಕರಿಸಿದೆ.

ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಮಹತ್ತರ ಯೋಜನೆ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಡೈಮರ್ ಭಾಷಾ ಅಣೆಕಟ್ಟು ನಿರ್ಮಿಸಲು 14 ಶತಕೋಟಿ ಡಾಲರ್ ಹಣ ನೀಡಲು ಚೀನಾ ಮುಂದೆ ಬಂದಿತ್ತು. ಆದರೆ ಸ್ವತಃ ಆಣೆಕಟ್ಟು ನಿರ್ಮಿಸುವ ಇಂಗಿತ ವ್ಯಕ್ತಪಡಿಸಿದ ಪಾಕಿಸ್ತಾನ, ಸ್ನೇಹಿತನಿಗೇ ಟಾಂಗ್ ನೀಡುವ ಮೂಲಕ ತನ್ನ ನರಿಬುದ್ಧಿ ಪ್ರದರ್ಶಿಸಿದೆ. ಇದರಿಂದ ಚೀನಾ ಪಾಡು ಬಾಲ ಸುಟ್ಟ ನರಿಯಂತಾಗಿದೆ.

ಈ ಪಾಕ್ ಆಕ್ರಮಿತ ಕಾಶ್ಮೀರ ವಿವಾದಿತ ಪ್ರದೇಶದಲ್ಲಿ ಯಾವುದೇ ಯೋಜನೆಗೆ ಸಾಲ ನೀಡಲು ಅಂತಾರಾಷ್ಟ್ರೀಯ ಸಂಸ್ಥೆ ಹಾಗೂ ಬ್ಯಾಂಕುಗಳು ಸಾಲ ನೀಡಲು ಒಪ್ಪಿಗೆ ಸೂಚಿಸುತ್ತಿಲ್ಲ. ಭಾರತವೂ ಏಷ್ಯನ್ ಅಭಿವೃದ್ಧಿ ಬ್ಯಾಂಕಿನಿಂದ ಸಾಲ ತೆಗೆದು ಡ್ಯಾಂ ನಿರ್ಮಿಸಲು ಮುಂದಾಗಿತ್ತಾದರೂ ಪ್ರಯತ್ನ ವಿಫಲವಾಗಿತ್ತು.

ಆದರೆ ಚೀನಾ, ಹಣದ ನೆರವಿನ ಮೂಲಕ ಪಾಕಿಸ್ತಾನವನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳುವ ದೃಷ್ಟಿಯಿಂದ 14 ಶತಕೋಟಿ ಡಾಲರ್ ನೀಡಲು ಮುಂದಾಗಿತ್ತು. ಆದರೆ 60 ಶತಕೋಟಿ ಡಾಲರ್ ವೆಚ್ಚದ ಸಿಪಿಇಸಿ ಯೋಜನೆಯಿಂದ ಡ್ಯಾಂ ಕಾಮಗಾರಿ ತಪ್ಪಿಸಲು ಪಾಕಿಸ್ತಾನ ಈ ಕುತಂತ್ರ ಬುದ್ಧಿ ಅನುಸರಿಸಿದೆ ಎಂದೇ ಹೇಳಲಾಗುತ್ತಿದೆ.

ಒಟ್ಟಿನಲ್ಲಿ ಚೀನಾದ ತಂತ್ರಕ್ಕೆ ಪಾಕಿಸ್ತಾನ ಕುತಂತ್ರದ ಅಸ್ತ್ರ ಬಳಸಿದ್ದು, ಪಾಕಿಸ್ತಾನ ಯಾವ ರಾಷ್ಟ್ರಕ್ಕೂ ನಿಷ್ಠೆಯಿಂದ ಇರಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇದು ಚೀನಾಕ್ಕೂ ಒಂದು ಪಾಠವಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search