• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದ ಸಾಲ ನೀಡುವ ಆಫರ್ ತಿರಸ್ಕರಿಸಿ ಮಿತ್ರನಿಗೇ ಟಾಂಗ್ ನೀಡಿದ ಪಾಕಿಸ್ತಾನ

TNN Correspondent Posted On November 17, 2017
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಪಾಕಿಸ್ತಾನಕ್ಕೆ ಹಣಕಾಸು ನೆರವು, ಯೋಜನೆ ಹಾಗೂ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪಾಕಿಸ್ತಾನವನ್ನು ಬೆಂಬಲಿಸಿ ಸ್ನೇಹ ಗಳಿಸಿದ್ದ ಚೀನಾಕ್ಕೆ ಪಾಕಿಸ್ತಾನ ಟಾಂಗ್ ನೀಡಿದ್ದು, 14 ಶತಕೋಟಿ ಡಾಲರ್ ಹಣ ಸಾಲ ನೀಡುವುದಾಗಿ ಚೀನಾ ನೀಡಿದ ಆಫರ್ ಪಾಕಿಸ್ತಾನ ತಿರಸ್ಕರಿಸಿದೆ.

ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಮಹತ್ತರ ಯೋಜನೆ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಡೈಮರ್ ಭಾಷಾ ಅಣೆಕಟ್ಟು ನಿರ್ಮಿಸಲು 14 ಶತಕೋಟಿ ಡಾಲರ್ ಹಣ ನೀಡಲು ಚೀನಾ ಮುಂದೆ ಬಂದಿತ್ತು. ಆದರೆ ಸ್ವತಃ ಆಣೆಕಟ್ಟು ನಿರ್ಮಿಸುವ ಇಂಗಿತ ವ್ಯಕ್ತಪಡಿಸಿದ ಪಾಕಿಸ್ತಾನ, ಸ್ನೇಹಿತನಿಗೇ ಟಾಂಗ್ ನೀಡುವ ಮೂಲಕ ತನ್ನ ನರಿಬುದ್ಧಿ ಪ್ರದರ್ಶಿಸಿದೆ. ಇದರಿಂದ ಚೀನಾ ಪಾಡು ಬಾಲ ಸುಟ್ಟ ನರಿಯಂತಾಗಿದೆ.

ಈ ಪಾಕ್ ಆಕ್ರಮಿತ ಕಾಶ್ಮೀರ ವಿವಾದಿತ ಪ್ರದೇಶದಲ್ಲಿ ಯಾವುದೇ ಯೋಜನೆಗೆ ಸಾಲ ನೀಡಲು ಅಂತಾರಾಷ್ಟ್ರೀಯ ಸಂಸ್ಥೆ ಹಾಗೂ ಬ್ಯಾಂಕುಗಳು ಸಾಲ ನೀಡಲು ಒಪ್ಪಿಗೆ ಸೂಚಿಸುತ್ತಿಲ್ಲ. ಭಾರತವೂ ಏಷ್ಯನ್ ಅಭಿವೃದ್ಧಿ ಬ್ಯಾಂಕಿನಿಂದ ಸಾಲ ತೆಗೆದು ಡ್ಯಾಂ ನಿರ್ಮಿಸಲು ಮುಂದಾಗಿತ್ತಾದರೂ ಪ್ರಯತ್ನ ವಿಫಲವಾಗಿತ್ತು.

ಆದರೆ ಚೀನಾ, ಹಣದ ನೆರವಿನ ಮೂಲಕ ಪಾಕಿಸ್ತಾನವನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳುವ ದೃಷ್ಟಿಯಿಂದ 14 ಶತಕೋಟಿ ಡಾಲರ್ ನೀಡಲು ಮುಂದಾಗಿತ್ತು. ಆದರೆ 60 ಶತಕೋಟಿ ಡಾಲರ್ ವೆಚ್ಚದ ಸಿಪಿಇಸಿ ಯೋಜನೆಯಿಂದ ಡ್ಯಾಂ ಕಾಮಗಾರಿ ತಪ್ಪಿಸಲು ಪಾಕಿಸ್ತಾನ ಈ ಕುತಂತ್ರ ಬುದ್ಧಿ ಅನುಸರಿಸಿದೆ ಎಂದೇ ಹೇಳಲಾಗುತ್ತಿದೆ.

ಒಟ್ಟಿನಲ್ಲಿ ಚೀನಾದ ತಂತ್ರಕ್ಕೆ ಪಾಕಿಸ್ತಾನ ಕುತಂತ್ರದ ಅಸ್ತ್ರ ಬಳಸಿದ್ದು, ಪಾಕಿಸ್ತಾನ ಯಾವ ರಾಷ್ಟ್ರಕ್ಕೂ ನಿಷ್ಠೆಯಿಂದ ಇರಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇದು ಚೀನಾಕ್ಕೂ ಒಂದು ಪಾಠವಾಗಿದೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search