• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಚೀನಾದ ಸಾಲ ನೀಡುವ ಆಫರ್ ತಿರಸ್ಕರಿಸಿ ಮಿತ್ರನಿಗೇ ಟಾಂಗ್ ನೀಡಿದ ಪಾಕಿಸ್ತಾನ

TNN Correspondent Posted On November 17, 2017


  • Share On Facebook
  • Tweet It

ಇಸ್ಲಾಮಾಬಾದ್: ಪಾಕಿಸ್ತಾನಕ್ಕೆ ಹಣಕಾಸು ನೆರವು, ಯೋಜನೆ ಹಾಗೂ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪಾಕಿಸ್ತಾನವನ್ನು ಬೆಂಬಲಿಸಿ ಸ್ನೇಹ ಗಳಿಸಿದ್ದ ಚೀನಾಕ್ಕೆ ಪಾಕಿಸ್ತಾನ ಟಾಂಗ್ ನೀಡಿದ್ದು, 14 ಶತಕೋಟಿ ಡಾಲರ್ ಹಣ ಸಾಲ ನೀಡುವುದಾಗಿ ಚೀನಾ ನೀಡಿದ ಆಫರ್ ಪಾಕಿಸ್ತಾನ ತಿರಸ್ಕರಿಸಿದೆ.

ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಮಹತ್ತರ ಯೋಜನೆ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಡೈಮರ್ ಭಾಷಾ ಅಣೆಕಟ್ಟು ನಿರ್ಮಿಸಲು 14 ಶತಕೋಟಿ ಡಾಲರ್ ಹಣ ನೀಡಲು ಚೀನಾ ಮುಂದೆ ಬಂದಿತ್ತು. ಆದರೆ ಸ್ವತಃ ಆಣೆಕಟ್ಟು ನಿರ್ಮಿಸುವ ಇಂಗಿತ ವ್ಯಕ್ತಪಡಿಸಿದ ಪಾಕಿಸ್ತಾನ, ಸ್ನೇಹಿತನಿಗೇ ಟಾಂಗ್ ನೀಡುವ ಮೂಲಕ ತನ್ನ ನರಿಬುದ್ಧಿ ಪ್ರದರ್ಶಿಸಿದೆ. ಇದರಿಂದ ಚೀನಾ ಪಾಡು ಬಾಲ ಸುಟ್ಟ ನರಿಯಂತಾಗಿದೆ.

ಈ ಪಾಕ್ ಆಕ್ರಮಿತ ಕಾಶ್ಮೀರ ವಿವಾದಿತ ಪ್ರದೇಶದಲ್ಲಿ ಯಾವುದೇ ಯೋಜನೆಗೆ ಸಾಲ ನೀಡಲು ಅಂತಾರಾಷ್ಟ್ರೀಯ ಸಂಸ್ಥೆ ಹಾಗೂ ಬ್ಯಾಂಕುಗಳು ಸಾಲ ನೀಡಲು ಒಪ್ಪಿಗೆ ಸೂಚಿಸುತ್ತಿಲ್ಲ. ಭಾರತವೂ ಏಷ್ಯನ್ ಅಭಿವೃದ್ಧಿ ಬ್ಯಾಂಕಿನಿಂದ ಸಾಲ ತೆಗೆದು ಡ್ಯಾಂ ನಿರ್ಮಿಸಲು ಮುಂದಾಗಿತ್ತಾದರೂ ಪ್ರಯತ್ನ ವಿಫಲವಾಗಿತ್ತು.

ಆದರೆ ಚೀನಾ, ಹಣದ ನೆರವಿನ ಮೂಲಕ ಪಾಕಿಸ್ತಾನವನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳುವ ದೃಷ್ಟಿಯಿಂದ 14 ಶತಕೋಟಿ ಡಾಲರ್ ನೀಡಲು ಮುಂದಾಗಿತ್ತು. ಆದರೆ 60 ಶತಕೋಟಿ ಡಾಲರ್ ವೆಚ್ಚದ ಸಿಪಿಇಸಿ ಯೋಜನೆಯಿಂದ ಡ್ಯಾಂ ಕಾಮಗಾರಿ ತಪ್ಪಿಸಲು ಪಾಕಿಸ್ತಾನ ಈ ಕುತಂತ್ರ ಬುದ್ಧಿ ಅನುಸರಿಸಿದೆ ಎಂದೇ ಹೇಳಲಾಗುತ್ತಿದೆ.

ಒಟ್ಟಿನಲ್ಲಿ ಚೀನಾದ ತಂತ್ರಕ್ಕೆ ಪಾಕಿಸ್ತಾನ ಕುತಂತ್ರದ ಅಸ್ತ್ರ ಬಳಸಿದ್ದು, ಪಾಕಿಸ್ತಾನ ಯಾವ ರಾಷ್ಟ್ರಕ್ಕೂ ನಿಷ್ಠೆಯಿಂದ ಇರಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇದು ಚೀನಾಕ್ಕೂ ಒಂದು ಪಾಠವಾಗಿದೆ.

  • Share On Facebook
  • Tweet It


- Advertisement -


Trending Now
ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
Tulunadu News February 1, 2023
ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
Tulunadu News January 31, 2023
Leave A Reply

  • Recent Posts

    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
  • Popular Posts

    • 1
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 2
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 3
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 4
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 5
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search