• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದ ಸಾಲ ನೀಡುವ ಆಫರ್ ತಿರಸ್ಕರಿಸಿ ಮಿತ್ರನಿಗೇ ಟಾಂಗ್ ನೀಡಿದ ಪಾಕಿಸ್ತಾನ

TNN Correspondent Posted On November 17, 2017
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಪಾಕಿಸ್ತಾನಕ್ಕೆ ಹಣಕಾಸು ನೆರವು, ಯೋಜನೆ ಹಾಗೂ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪಾಕಿಸ್ತಾನವನ್ನು ಬೆಂಬಲಿಸಿ ಸ್ನೇಹ ಗಳಿಸಿದ್ದ ಚೀನಾಕ್ಕೆ ಪಾಕಿಸ್ತಾನ ಟಾಂಗ್ ನೀಡಿದ್ದು, 14 ಶತಕೋಟಿ ಡಾಲರ್ ಹಣ ಸಾಲ ನೀಡುವುದಾಗಿ ಚೀನಾ ನೀಡಿದ ಆಫರ್ ಪಾಕಿಸ್ತಾನ ತಿರಸ್ಕರಿಸಿದೆ.

ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಮಹತ್ತರ ಯೋಜನೆ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಡೈಮರ್ ಭಾಷಾ ಅಣೆಕಟ್ಟು ನಿರ್ಮಿಸಲು 14 ಶತಕೋಟಿ ಡಾಲರ್ ಹಣ ನೀಡಲು ಚೀನಾ ಮುಂದೆ ಬಂದಿತ್ತು. ಆದರೆ ಸ್ವತಃ ಆಣೆಕಟ್ಟು ನಿರ್ಮಿಸುವ ಇಂಗಿತ ವ್ಯಕ್ತಪಡಿಸಿದ ಪಾಕಿಸ್ತಾನ, ಸ್ನೇಹಿತನಿಗೇ ಟಾಂಗ್ ನೀಡುವ ಮೂಲಕ ತನ್ನ ನರಿಬುದ್ಧಿ ಪ್ರದರ್ಶಿಸಿದೆ. ಇದರಿಂದ ಚೀನಾ ಪಾಡು ಬಾಲ ಸುಟ್ಟ ನರಿಯಂತಾಗಿದೆ.

ಈ ಪಾಕ್ ಆಕ್ರಮಿತ ಕಾಶ್ಮೀರ ವಿವಾದಿತ ಪ್ರದೇಶದಲ್ಲಿ ಯಾವುದೇ ಯೋಜನೆಗೆ ಸಾಲ ನೀಡಲು ಅಂತಾರಾಷ್ಟ್ರೀಯ ಸಂಸ್ಥೆ ಹಾಗೂ ಬ್ಯಾಂಕುಗಳು ಸಾಲ ನೀಡಲು ಒಪ್ಪಿಗೆ ಸೂಚಿಸುತ್ತಿಲ್ಲ. ಭಾರತವೂ ಏಷ್ಯನ್ ಅಭಿವೃದ್ಧಿ ಬ್ಯಾಂಕಿನಿಂದ ಸಾಲ ತೆಗೆದು ಡ್ಯಾಂ ನಿರ್ಮಿಸಲು ಮುಂದಾಗಿತ್ತಾದರೂ ಪ್ರಯತ್ನ ವಿಫಲವಾಗಿತ್ತು.

ಆದರೆ ಚೀನಾ, ಹಣದ ನೆರವಿನ ಮೂಲಕ ಪಾಕಿಸ್ತಾನವನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳುವ ದೃಷ್ಟಿಯಿಂದ 14 ಶತಕೋಟಿ ಡಾಲರ್ ನೀಡಲು ಮುಂದಾಗಿತ್ತು. ಆದರೆ 60 ಶತಕೋಟಿ ಡಾಲರ್ ವೆಚ್ಚದ ಸಿಪಿಇಸಿ ಯೋಜನೆಯಿಂದ ಡ್ಯಾಂ ಕಾಮಗಾರಿ ತಪ್ಪಿಸಲು ಪಾಕಿಸ್ತಾನ ಈ ಕುತಂತ್ರ ಬುದ್ಧಿ ಅನುಸರಿಸಿದೆ ಎಂದೇ ಹೇಳಲಾಗುತ್ತಿದೆ.

ಒಟ್ಟಿನಲ್ಲಿ ಚೀನಾದ ತಂತ್ರಕ್ಕೆ ಪಾಕಿಸ್ತಾನ ಕುತಂತ್ರದ ಅಸ್ತ್ರ ಬಳಸಿದ್ದು, ಪಾಕಿಸ್ತಾನ ಯಾವ ರಾಷ್ಟ್ರಕ್ಕೂ ನಿಷ್ಠೆಯಿಂದ ಇರಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇದು ಚೀನಾಕ್ಕೂ ಒಂದು ಪಾಠವಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search