• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಖಲಿಸ್ತಾನ ಹೋರಾಟಕ್ಕೆ ಮರುಜೀವ ನೀಡಲು ಪಾಕ್ ಐಎಸ್ಐ ಕುತಂತ್ರ

TNN Correspondent Posted On November 17, 2017
0


0
Shares
  • Share On Facebook
  • Tweet It

ಚಂಡಿಗಡ್: ಪಾಕ್ ಗುಪ್ತಚರ ಸಂಸ್ಥೆ ಐಎಸ್ಐ ಕೇವಲ ಪಾಕಿಸ್ತಾನದಲ್ಲಷ್ಟೇ ಅಲ್ಲ, ಭಾರತದ ನೆಮ್ಮದಿ ಹಾಳು ಮಾಡಲು ಪ್ರಯತ್ನಿಸುತ್ತಿದೆ. ಕೆನಡಾ, ಯುಕೆ ಮತ್ತು ಇಟಲಿ ಮೂಲಕ ತನ್ನ ಗುಪ್ತಚರ ಕಾರ್ಯವನ್ನು ಮಾಡುತ್ತಿದ್ದು,  ಭಾರತದಲ್ಲಿ ಖಲಿಸ್ತಾನದ ಹೋರಾಟಕ್ಕೆ ಮರುಜೀವ ನೀಡಲು ಸಂಚು ಹೂಡುತ್ತಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ.

ಖಲಿಸ್ತಾನ ಪ್ರತ್ಯೇಕ ಹೋರಾಟ ನಿಯಂತ್ರಣಕ್ಕೆ ಪಂಜಾಬ್ ಸರಕಾರ ಪಂಜಾಬ್ ಕಂಟ್ರೋಲ್ ಆಫ್ ಆರ್ಗನೈಸಡ್ ಕ್ರೈಮ್ ಆ್ಯಕ್ಟ್ ಜಾರಿಗೆ ತಂದಿದ್ದು, ಯಾವುದೇ ಕಾರಣಕ್ಕೂ ಪಾಕ್ ಕುತಂತ್ರಕ್ಕೆ ಬಲಿಯಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಖಲಿಸ್ತಾನ ಹೋರಾಟಗಾರರಿಗೆ ಬೆಂಬಲ ನೀಡುವುದು, ಪೂರಕ ಸಾಮಾಗ್ರಿ ಪೂರೈಸುವುದನ್ನು ನಾನಾ ಮೂಲಗಳಿಂದ ಮಾಡುತ್ತಿದೆ. ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಹಾಳುಗೆಡವಲು ನಿರ್ಧರಿಸಿದೆ. ಅದಕ್ಕಾಗಿ ಸ್ಥಳೀಯ ರೌಡಿ ಗುಂಪುಗಳ ಮುಖಂಡರನ್ನು ಬಳಸಿಕೊಳ್ಳುತ್ತಿದೆ ಎಂಬ ಮಾಹಿತಿ ಇತ್ತೀಚೆಗೆ ಬಂಧಿಸಿದ ಆರೋಪಿಗಳಿಂದ ಹೊರ ಬಂದಿದೆ ಎಂದು ತಿಳಿಸಿದ್ದಾರೆ.

ಪಂಜಾಬ್ ನಲ್ಲಿ ಭಯೋತ್ಪಾದನೆ ಸೃಷ್ಟಿಸುವುದನ್ನು ತಡೆಯಲು ಪಂಜಾಬ್ ಗುಪ್ತಚರ ಸಂಸ್ಥೆಗಳು ಕೇಂದ್ರ ಸರಕಾರದ ತನಿಖಾ ಸಂಸ್ಥೆಗಳ ಸಹಕಾರದೊಂದಿಗೆ ಸೂಕ್ತ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪಂಜಾಬ್ ನಲ್ಲಿ ನಡೆದ ಹಿಂದೂ ಮುಖಂಡರ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಆರು ಆರೋಪಿಗಳನ್ನು  ಪಂಜಾಬ್ ಪೊಲೀಸರು ಬಂಧಿಸಿದ್ದರು. ಆ ಆರೋಪಿಗಳು ಪಾಕ್ ಗುಪ್ತಚರ ಇಲಾಖೆ ಕೆನಡಾ, ಯುಕೆ, ಇಟಲಿ ಮೂಲಕ ಭಾರತದಲ್ಲಿ ಕೋಮು ಗಲಭೆ ಸೃಷ್ಟಿಸಲು ಸಂಚು ಹೂಡಿದೆ ಎಂಬ ಮಾಹಿತಿ ಹೊರ ಬಿದ್ದಿತ್ತು.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search