• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಸಿಎಂ ಸಿದ್ದರಾಮಯ್ಯನವರೇ, ಖಾಸಗಿ ವೈದ್ಯರೇ, ನೀವು ರಾಜಿಯಾಗಲು 80 ಜನರ ಬಲಿ ಬೇಕಾಯಿತೆ?

-ವಿಶಾಲ್ ಗೌಡ, ಕುಶಾಲನಗರ Posted On November 18, 2017
0


0
Shares
  • Share On Facebook
  • Tweet It

ಬೀದರಿನ ಹುಮನಾಬಾದ್ ನಲ್ಲಿ ಹೃದಯಾಘಾತ ಬಳಿಕ ಚಿಕಿತ್ಸೆ ದೊರಕದೆ ಅನಿವಾಶ್ (35) ಸಾವು…

ಖಾಸಗಿ ವೈದ್ಯರ ಮುಷ್ಕರಕ್ಕೆ ಪುತ್ತೂರಿನಲ್ಲಿ ಬಾಲಕಿ ಬಲಿ…

ಚಿಂತಾಮಣಿಯಲ್ಲಿ ಶಿಡ್ಲಘಟ್ಟ, ಚಿಂತಾಮಣಿ, ಕೋಲಾರ ಸುತ್ತಿದರೂ ವೈದ್ಯರು ಸಿಗದೆ 5 ತಿಂಗಳ ಮಗು ಸಾವು…

ಹಲವು ದಿನಗಳಿಂದ ರಾಜ್ಯದಲ್ಲಿ ಖಾಸಗಿ ವೈದ್ಯರ ಮುಷ್ಕರ, 80ಕ್ಕೂ ಅಧಿಕ ಜನ ಸಾವು…

ಅಷ್ಟಾದರೂ ಕಡೆದು ಕಟ್ಟೆ ಹಾಕಿದ್ದೇನು?

ಚಿಕಿತ್ಸೆ ನೀಡುವಾಗ ತಪ್ಪೆಸಗಿದ ವೈದ್ಯರಿಗೆ ಜೈಲು ಶಿಕ್ಷೆ ಬದಲಿಗೆ ದಂಡ…

ಶವ ಇಟ್ಟುಕೊಂಡು ಹಣಕ್ಕಾಗಿ ಪೀಡನೆ ಮಾಡುವಂತಿಲ್ಲ…

ಕುಂದು ಕೊರತೆ ಸಮಿತಿ ದೋಷ ಕೈ ಬಿಡುವುದು…

ಹೀಗೆ, ಇಂಥ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಲು ಒಪ್ಪಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ ಅಂಗೀಕರಿಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ. ಖಾಸಗಿ ವೈದ್ಯರು ಸಹ ತಮಗೆ ಅನುಕೂಲವಾಯಿತು ಎಂದು ಸರ್ಕಾರದ ಜತೆ ರಾಜಿ ಮಾಡಿಕೊಂಡಿದ್ದಾರೆ. ಖಂಡಿತವಾಗಿಯೂ ವೈದ್ಯರು ಮುಷ್ಕರ ಕೈ ಬಿಟ್ಟಿದ್ದು ಸ್ವಾಗತಾರ್ಹವೇ ಆಗಿದೆ.

ಆದರೆ, ಐದು ದಿನಗಳಲ್ಲಿ ಮೃತಪಟ್ಟ 80 ಜೀವಗಳನ್ನು ಬದುಕಿಸಬಲ್ಲಿರೇ ಮುಖ್ಯಮಂತ್ರಿಯವರೇ? 80 ಜೀವಗಳ ಕುಟುಂಬಸ್ಥರನ್ನು ಯಾವ ಇಂಜೆಕ್ಷನ್ ಮೂಲಕ ಗುಣಪಡಿಸಬಲ್ಲಿರಿ ಖಾಸಗಿ ವೈದ್ಯರೇ?

ಇಂಥಾದ್ದೊಂದು ಮಸೂದೆ ಅಂಗೀಕರಿಸುವ ಮುನ್ನ ರಾಜ್ಯ ಸರ್ಕಾರ ಖಾಸಗಿ ವೈದ್ಯರ ಜತೆ ಚರ್ಚಿಸಬೇಕಿತ್ತು. ಖಾಸಗಿ ವೈದ್ಯರು ಸಹ ಆಸ್ಪತ್ರೆಗೆ ಬೀಗ ಜಡಿಯದೆಯೇ ಪ್ರತಿಭಟನೆ ಮಾಡಬಹುದಿತ್ತು. ಆದಾವುದೂ ಆಗಲಿಲ್ಲ. ರಾಜ್ಯ ಸರ್ಕಾರವೇನೋ ಮೊಂಡು ವಾದ ಹಿಡಿಯಿತು. ಇತ್ತ ವೈದ್ಯರೂ ಭಂಡತನಕ್ಕೆ ಬಿದ್ದರು, ಹಾಗಾಗಿ ಐದು ದಿನ ಖಾಸಗಿ ಆಸ್ಪತ್ರೆಗಳು ಬಂದ್ ಆದವು. ದಿನಕ್ಕಿಷ್ಟು ಜೀವಗಳು ತರೆಗೆಲೆಗಳಂತೆ ಉದುರಿದವು. ಅನಾರೋಗ್ಯಕ್ಕೀಡಾದ ಜನ ಬೀದಿ ಬೀದಿ, ಆಸ್ಪತ್ರೆ, ಆಸ್ಪತ್ರೆ ಅಲೆದಾಡಿದರು, ಬಸವಳಿದರು.

ಜನ ಹಿತಕ್ಕಾಗಿ ಜಾರಿ ಮಾಡಲು ಹೊರಟಿದ್ದೇವೆ ಎಂದ ಮುಖ್ಯಮಂತ್ರಿಯವರು ಖಾಸಗಿ ವೈದ್ಯರು ಪ್ರತಿಭಟನೆ ಮಾಡಲು ಶುರುಮಾಡಿದಾಗಲೇ ಅವರ ಜತೆ ರಾಜೀಮಾಡಿಕೊಳ್ಳಬಹುದಿತ್ತು. ಆದರೆ, ಕೇವಲ ಅರ್ಧತಾಸಿನ ಸಭೆ ಸೇರಲು, ಸಂಧಾನ ಮಾಡಿಕೊಳ್ಳಲು ಸಿದ್ದರಾಮಯ್ಯ ಅವರು 80 ಜೀವ ಹೋಗುವ ತನಕ ಕಾಯ್ದರು. ಅತ್ತ ವೈದ್ಯೋ ನಾರಾಯಣ ಹರಿ ಎಂಬ ಹಣೆಪಟ್ಟಿ ತೊಟ್ಟ ವೈದ್ಯರು, ಅಕ್ಷರಶಃ 80 ಜನರ ಪಾಲಿಗೆ ಯಮಧೂತರಾದರು. ಹೀಗೆ ಇವರಿಬ್ಬರು ಮಾಡಿದ ತಪ್ಪಿಗೆ ರಾಜ್ಯದ ಜನ ತೊಂದರೆ ಅನುಭವಿಸುವಂತಾಯಿತು. ಪ್ರಾಣ ಕಳೆದುಕೊಳ್ಳಬಹುದಾಯಿತು. ಒಟ್ಟಿನಲ್ಲಿ ಕರ್ನಾಟಕ ಖಾಸಗಿ ವೈದ್ಯ ಸಂಸ್ಥೆಗಳ ಮಸೂದೆ 80 ಜೀವಗಳನ್ನು ಪಡೆಯಿತು. ಈ 80 ಜನರ ಹಾಗೂ ಅವರ ಕುಟುಂಬದವರ ಶಾಪ ತಟ್ಟದೆ ಇರುತ್ತದೆಯೇ ಮುಖ್ಯಮಂತ್ರಿ ಹಾಗೂ ಖಾಸಗಿ ವೈದ್ಯರೇ? ನಿಮ್ಮ ಕುಟುಂಬಸ್ಥರಿಗೇ (ಹಾಗೆ ಆಗದಿರಲಿ) ಇಂಥ ಪರಿಸ್ಥಿತಿ ಬಂದಿದ್ದರೆ ಸುಮ್ಮನಿರುತ್ತಿದ್ರಾ? ಮನುಷ್ಯತ್ವ ಮರೆಯುವ ಮುನ್ನ ಒಮ್ಮೆಯಾದರೂ ಯೋಚಿಸಿ.

 

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
-ವಿಶಾಲ್ ಗೌಡ, ಕುಶಾಲನಗರ January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
-ವಿಶಾಲ್ ಗೌಡ, ಕುಶಾಲನಗರ January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search