• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಅಕ್ರಮ ಆಸ್ತಿ ಪ್ರಕರಣದಲ್ಲಿ ಶಶಿಕಲಾ ಜೈಲು ಪಾಲಾದರೆ, ತೆರಿಗೆ ವಂಚನೆಯಲ್ಲಿ ಈಗ ಪತಿ ನಟರಾಜನ್ ಜೈಲಿಗೆ!

TNN Correspondent Posted On November 18, 2017
0


0
Shares
  • Share On Facebook
  • Tweet It

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿಧನದ ಬಳಿಕ ಅವರ ಆಪ್ತೆ ಶಶಿಕಲಾ ನಟರಾಜನ್ ಗೆ ಬರೀ ಆಪತ್ತೇ ಎದುರಾಗಿದೆ. ಜಯಲಲಿತಾ ಬಳಿಕ ಶಶಿಕಲಾ ಬದಲಿಗೆ ಪನ್ನೀರ್ ಸೆಲ್ವಂ ಸಿಎಂ ಆದರು. ಬಳಿಕ ಸಿಎಂ ಆಗುವ ಅವಕಾಶ ಸಿಕ್ಕರೂ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾರೇ ಜೈಲುಪಾಲಾಗಬೇಕಾಯಿತು. ಅತ್ತ ಸಂಬಂಧಿ ಟಿಟಿವಿ ದಿನಕರನ್ಗೂ ಹಿನ್ನಡೆಯಾಯಿತು.

ಈಗ ಅದೇ ಶಶಿಕಲಾ ಪತಿ ನಟರಾಜನ್, ತೆರಿಗೆ ವಂಚನೆ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಹೌದು, ನಟರಾಜನ್ 1994ರಲ್ಲಿ ಲೆಕ್ಸಸ್ ಎಂಬ ಐಷಾರಾಮಿ ಕಾರು ಖರೀದಿಸಿದ್ದು, ಅದಕ್ಕೆ 1.62 ಕೋಟಿ ರುಪಾಯಿ ತೆರಿಗೆ ಪಾವತಿಸಿರಲಿಲ್ಲ. ಈ ಕುರಿತು 2010ರಲ್ಲಿ ನಟರಾಜನ್ ಸೇರಿ ಮೂವರ ವಿರುದ್ಧ ಆರ್ಥಿಕ ಅಪರಾಧ ಪ್ರಕರಣದಲ್ಲಿ ಎರಡು ಪ್ರಕರಣ ದಾಖಲಾಗಿದ್ದವು.

ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ನಾಲ್ವರನ್ನೂ ದೋಷಿಗಳೆಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದ ನಟರಾಜನ್ ಗೆ ಈಗ ಹಿನ್ನಡೆಯಾಗಿದ್ದು ಮದ್ರಾಸ್ ಹೈಕೋರ್ಟ್ ಅಧೀನ ನ್ಯಾಯಾಲಯದ ತೀರ್ಪನ್ನೇ ಎತ್ತಿ ಹಿಡಿದಿದ್ದು, 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೆ, ಜಯಲಲಿತಾ ವಾಸವಿದ್ದ ಪೋಯೆಸ್ ಗಾರ್ಡನ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಜಯಲಲಿತಾ ಆಪ್ತೆ ಶಶಿಕಲಾಗೆ ಹಿನ್ನಡೆಯೇ ಸರಿ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search