• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನೇಕೆ ಮತ್ತೆ ಬಿಜೆಪಿ ಸೇರಿದೆ ಗೊತ್ತಾ: ಮೋದಿ ಜತೆ ಕೈ ಜೋಡಿಸಿದ್ದಕ್ಕೆ ಕಾರಣ ತಿಳಿಸಿದ ನಿತೀಶ್ ಕುಮಾರ್

TNN Correspondent Posted On November 18, 2017
0


0
Shares
  • Share On Facebook
  • Tweet It

ಪಟನಾ: ರಾಜಕೀಯದಲ್ಲಿ ಬರೀ ಅಧಿಕಾರಕ್ಕೆ ಯಾರು ಯಾರ ಜತೆ ಬೇಕಾದರೂ ಕೈ ಜೋಡಿಸುತ್ತಾರೆ ಎಂಬುದು ಸಾಮಾನ್ಯವಾಗಿ ಚಾಲ್ತಿಯಲ್ಲಿರುವ ಮಾತು. ಅವರು ಯಾಕೆ ಬೇರೆ ಪಕ್ಷದೊಂದಿಗೆ ಕೈ ಜೋಡಿಸಿದರೂ ಎಂದೂ ಸಹ ಜನರಿಗೆ ಹೇಳದಿರುವ ಕಾರಣ ಇವರು ಅಧಕಾರಕ್ಕಾಗಿಯೇ ಕೈ ಜೋಡಿಸಿದರು ಎಂದು ಜನರೂ ಭಾವಿಸುತ್ತಾರೆ, ವಾಸ್ತವದಲ್ಲೂ ಅದೇ ಆಗಿರುತ್ತದೆ.

ಆದರೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತ್ರ ಇಂಥ ಸಂಪ್ರದಾಯಕ್ಕೆ ವಿದಾಯ ಹೇಳಿದ್ದು, ಅವರೇಕೆ ಲಾಲೂ ಪ್ರಸಾದ್ ಯಾದವ್ ಸಂಗ ಬಿಟ್ಟು ಬಿಜೆಪಿ ಹಾಗೂ ಪ್ರಧಾನಿ ಮೋದಿ ಜತೆ ಕೈ ಜೋಡಿಸಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಹಿಂಬಾಗಿಲಿನಿಂದ ದೇಶವನ್ನಾಳದೆ, ಜನರಿಗೆ ನೇರವಾಗಿ ಆಡಳಿತ ನಡೆಸುತ್ತಾರೆ. ಹೀಗೆ ನೇರ ಆಡಳಿತ ಮಾಡುವುದರಿಂದ ಒಳ್ಳೆಯದಾದರೂ ಅವರನ್ನು ಹೊಗಳುತ್ತಾರೆ ಹಾಗೂ ಕೆಟ್ಟದಾದರೂ ಅವರನ್ನೇ ಹೊಗಳುತ್ತಾರೆ. ಹೀಗಿರುವಾಗ ನರೇಂದ್ರ ಮೋದಿ ಅವರು ಛಾತಿಯಿಂದ ಆಡಳಿತ ನಡೆಸುತ್ತಾರೆ ಎಂದು ನಿತೀಶ್ ಹೇಳಿದ್ದಾರೆ.

ಹೀಗೆ ಹಿಂದಿನ ಪಕ್ಷ ಜನರ ಜತೆಯಿದ್ದು, ನೇರವಾಗಿ ಆಡಳಿತ ನಡೆಸದೆ ಹಿಂಬಾಗಲಿನಿಂದ ಆಡಳಿತ ನಡೆಸಿತು. ಒಳ್ಳೆಯದಾದದರೆ ಅದರ ಕ್ರೆಡಿಟ್ ತಾವು ಪಡೆದು, ಕೆಡುಕಾದರೆ ಬೇರೆಯವರ ತಲೆಗೆ ಕಟ್ಟುತ್ತಿತ್ತು ಎಂದು ಕಾಂಗ್ರೆಸ್ಸಿಗೂ ನಿತೀಶ್ ಟಾಂಗ್ ನೀಡಿದ್ದಾರೆ.

ಅಲ್ಲದೆ, ನರೇಂದ್ರ ಮೋದಿ ಅವರು ಘೋಷಿಸಿದ ನೋಟು ನಿಷೇಧ ಅತ್ಯಂತ ಮಹತ್ವ ಪೂರ್ಣ ನಿರ್ಧಾರವಾಗಿದೆ. 2016ರ ನ.8ರಂದು ಮೋದಿ ಅವರು ತೆಗೆದುಕೊಂಡ ನಿರ್ಧಾರದಿಂದ ಇಡೀ ದೇಶದ ಚಹರೆಯೇ ಬದಲಾಯಿತು. ಈ ಎಲ್ಲ ಕಾರಣಗಳಿಂದ ನರೇಂದ್ರ ಮೋದಿ ಅವರನ್ನ ಬೆಂಬಲಿಸಲಾಯಿತು ಎಂದು ನಿತೀಶ್ ಕುಮಾರ್ ಕಾರ್ಯಕ್ರಮವೊಂದರಲ್ಲಿ ಸ್ಪಷ್ಟಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search