• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇರಳದ ನಂತರ ಮುಂಬೈಯಲ್ಲೂ ಲವ್ ಜಿಹಾದ್ ಭೂತ: ಮತಾಂತರಕ್ಕಾಗಿ ಗಂಡನಿಂದ ಕಿರುಕುಳ ಎಂದು ಮಾಡೆಲ್ ದೂರು!

TNN Correspondent Posted On November 19, 2017
0


0
Shares
  • Share On Facebook
  • Tweet It

ಎಫ್ಐಆರ್ ಪ್ರತಿ

ಮುಂಬೈ: ಕೇರಳದಲ್ಲಿ ಲವ್ ಜಿಹಾದ್ ಪ್ರಕರಣಗಳ ಕುರಿತು ಎನ್ಐಎ ತನಿಖೆ ನಡೆಸುತ್ತಿರುವ ಬೆನ್ನಲ್ಲೇ ಮುಂಬೈಯಲ್ಲೂ ಇದೇ ಪ್ರಕರಣ ಸುದ್ದಿಯಾಗಿದ್ದು, ಇಸ್ಲಾಂಗೆ ಮತಾಂತರ ಆಗು ಎಂದು ಗಂಡ ಪ್ರತಿದಿನ ಕಿರುಕುಳ ನೀಡುತ್ತಿದ್ದಾನೆ ಎಂದು ಮಾಡೆಲ್ ಒಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

ರಶ್ಮಿ ಎಂಬ ಮಾಡೆಲ್ ಆಸಿಫ್ ಎಂಬಾತನನ್ನು 2005ರಲ್ಲಿ ಮದುವೆಯಾಗಿದ್ದು, ಏಳು ವರ್ಷದ ಒಬ್ಬ ಮಗನಿದ್ದಾನೆ. ಆದರೆ ಇತ್ತೀಚೆಗೆ ಆತ ಇಸ್ಲಾಂಗೆ ಮತಾಂತರವಾಗು ಎಂದು ಪೀಡಿಸುತ್ತಿದ್ದು, ಹಲ್ಲೆ ಮಾಡಿದ್ದಾನೆ ಎಂದು ದೂರು ನೀಡಿದ್ದಾರೆ.

ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಮಹಿಳೆ ಹೇಳಿಕೆ ಆಧರಿಸಿ ಪೊಲೀಸರು ಆಸಿಫ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಶುಕ್ರವಾರ ಮನೆಗೆ ಬಂದ ಪತಿ ಇಸ್ಲಾಂಗೆ ಮತಾಂತರವಾಗು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ, ಪಾತ್ರೆಗಳಿಂದ ಹಲ್ಲೆ ಮಾಡಿದ್ದಾನೆ. ಅಲ್ಲದೆ ಮನೆ ಬಿಟ್ಟು ಹೋಗು ಎಂದು ಪೀಡಿಸಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ.

ಆದಾಗ್ಯೂ, ಆಸಿಫ್ ಇತ್ತೀಚೆಗೆ ಮತ್ತೊಂದು ಮದುವೆಯಾಗಿದ್ದು, ನನ್ನನ್ನು ಮನೆಯಿಂದ ಹೊರಹಾಕುವ ಹುನ್ನಾರ ಮಾಡಿದ್ದಾನೆ. ಇತ್ತೀಚೆಗೆ ಮದುವೆಯಾದ ಮಹಿಳೆ ಇಸ್ಲಾಂಗೆ ಮತಾಂತರ ಸಹ ಆಗಿದ್ದಾಳೆ ಎಂದು ಮಾಡೆಲ್ ದೂರಿದ ಹಿನ್ನೆಲೆಯಲ್ಲಿ ಪೊಲೀಸರು, ಇದು ಲವ್ ಜಿಹಾದ್ ಇರಬಹುದೆಂದು ಶಂಕಿಸಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಕೇರಳ, ಪಂಜಾಬ್ ಸೇರಿ ಹಲವೆಡೆ ಲವ್ ಜಿಹಾದ್ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ ಮುಂಬೈಯಲ್ಲೂ ಇಂಥ ಪ್ರಕರಣ ಕೇಳಿ ಬಂದಿದ್ದು, ಇಸ್ಲಾಂ ಮೂಲಭೂತವಾದದ ಪರಾಕಾಷ್ಠೆಯೇ ಸರಿ ಎಂಬ ಮಾತು ಕೇಳಿಬರುತ್ತಿವೆ. ಆದರೆ, ಇಂಥ ಪ್ರಕರಣಗಳ ಬಗ್ಗೆ, ಹಿಂದೂ ಮಹಿಳೆಯರ ಬಗ್ಗೆ ಯಾವ ಪ್ರಗತಿಪರರೂ ಸೊಲ್ಲೆತ್ತದೇ ಇರುವುದು ಸಹ ನಾಚಿಕೆಗೇಡಿನ ಸಂಗತಿಯಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search