• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ತಾಯಿಗಿಂತ ದೊಡ್ಡ ಸ್ಥಾನವಿಲ್ಲ ಎಂದ ಮಾನುಷಿಗೆ ವಿಶ್ವಸುಂದರಿ ಪಟ್ಟ

TNN Correspondent Posted On November 19, 2017
0


0
Shares
  • Share On Facebook
  • Tweet It

ಬೀಜಿಂಗ್: ‘ತಾಯಿ ಸ್ಥಾನವೇ ಅತಿ ದೊಡ್ಡದು. ಬರೀ ಹಣದಿಂದ ಏನನ್ನು ಅಳೆಯಲು ಆಗುವುದಿಲ್ಲ. ಪ್ರೀತಿ ಮತ್ತು ವಿಶ್ವಾಸಕ್ಕೆ ಸಾಟಿ ತಾಯಿ. ತಾಯಿಯೇ ನನ್ನ ಜೀವನಕ್ಕೆ ಸ್ಫೂರ್ತಿ. ತಾಯಿ ಸ್ಥಾನ ಅತ್ಯಂತ ಗೌರವಯುತವಾದದ್ದು ಎಂದು ಟಾಪ್ 5ರ ಸ್ಥಾನದಲ್ಲಿದ್ದಾಗ ವಿಶ್ವಸುಂದರಿ ಆಯ್ಕೆಗಾರರು ಕೇಳಿದ ಯಾವ ವೃತ್ತಿ ಶ್ರೇಷ್ಠ, ಯಾವ ವೃತ್ತಿಗೆ ಅತಿ ಹೆಚ್ಚು ಸಂಭಾವನೆ ದೊರೆಯುತ್ತದೆ ಎಂಬ ಪ್ರಶ್ನೆಗೆ ವಿಶ್ವಸುಂದರಿ ಮಾನುಷಿ ಚಿಲ್ಲರ್ ಉತ್ತರಿಸಿ ಪರಿ ಇದು.

ಈಗ ಅದೇ 20 ವರ್ಷದ ಸುಂದರಿ ಮಾನುಷಿಗೆ ವಿಶ್ವಸುಂದರಿ ಪಟ್ಟ ದೊರಕಿದೆ. 17 ವರ್ಷದ ನಂತರ ವಿಶ್ವಸುಂದರಿ ಪ್ರಶಸ್ತಿಯನ್ನು ಭಾರತದ ಮಾನುಷಿ ಚಿಲ್ಲರ್ ಮುಡಿಗೇರಿಸಿಕೊಂಡಿದ್ದಾರೆ. ಶನಿವಾರ ಚೀನಾದ ಸಾನ್ಯದಲ್ಲಿ ನಡೆದ ವಿಶ್ವಸುಂದರಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 108 ಜನರಲ್ಲಿ ಮಾನುಷಿ ಪ್ರಥಮರಾಗಿ ಆಯ್ಕೆಯಾಗಿದ್ದಾರೆ.

ಭಾರತದಿಂದ 2000ರಲ್ಲಿ ಆಯ್ಕೆಯಾದ ನಟಿ ಪ್ರಿಯಾಂಕಾ ಚೋಪ್ರಾ ನಂತರ ಇದೀಗ ವಿಶ್ವಸುಂದರಿಯಾಗಿ ಮಾನುಷಿ ಚಿಲ್ಲರ್ ಹೊರ ಹೊಮ್ಮಿದ್ದಾರೆ. ವಿಶ್ವಸುಂದರಿ 2016ರ ಪಟ್ಟಹೊಂದಿದ್ದ ಪೋರ್ಟೋ ರಿಕೋ ಸ್ಟಿಪನಿಯಾ ಮಾನುಷಿಗೆ ವಿಶ್ವಸುಂದರಿ ಕಿರೀಟ ಧರಿಸಿದರು.  ಈ ಅದ್ಭುತ ಕ್ಷಣಕ್ಕೆ ಚಿಲ್ಲರ್ ಅವರ ತಂದೆ, ತಾಯಿ, ಸಹೋದರ, ಸಹೋದರಿ ಸಾಕ್ಷಿಯಾಗಿದ್ದರು.

ಹರ್ಯಾಣ ಮೂಲದ 20 ವಯಸ್ಸಿನ ಮಾನುಷಿ ಭಾರತದಲ್ಲಿ ನಡೆದ ಫೇಮಿನಾ ಮಿಸ್ ಇಂಡಿಯಾ ಪ್ರಶಸ್ತಿಯನ್ನು ಪಡೆದಿದ್ದರು. ವೈದ್ಯರ ಪುತ್ರಿಯಾಗಿರುವ ಮಾನುಷಿ ದೆಹಲಿಯಲ್ಲಿರುವ ಸೆಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, ಸೋನೆಪತ್ ನಲ್ಲಿ ಮಹಿಳೆಯರ ಸರಕಾರಿ ಮೆಡಿಕಲ್ ಕಾಲೇಜಿನಲ್ಲಿ ಮೆಡಿಕಲ್ ಅಧ್ಯಯನ ಮಾಡುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search