• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಿಶ್ವಸುಂದರಿಗೆ ಅವಮಾನ ಮಾಡಿ ಚಿಲ್ಲರೆತನ ಪ್ರದರ್ಶಿಸಿದ ತರೂರ್

TNN Correspondent Posted On November 20, 2017
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ಸಂಸದ ಶಶಿತರೂರ ಕೇಂದ್ರದಲ್ಲಿರುವ ಬಿಜೆಪಿ ಸರಕಾರದ ನೋಟ್ಯಂತರವನ್ನು ಟೀಕಿಸುವ ಭರದಲ್ಲಿ ವಿಶ್ವಸುಂದರಿಯಾಗಿ ಆಯ್ಕೆಯಾಗಿರುವ ಮಾನುಷಿ ಛಿಲ್ಲರ್ ಅವರನ್ನು ಹೀನಾಯವಾಗಿ ಅವಮಾನ ಮಾಡಿದ್ದಾರೆ. ನೋಟ್ಯಂತರದ ಕುರಿತು ಟ್ವೀಟ್ ಮಾಡಿರುವ ಶಶಿ ತರೂರ ಮಾನುಷಿ ಅವರ ಕುಟುಂಬದ ಹೆಸರು ಛಿಲ್ಲರ್ ಅವರನ್ನು ಚಿಲ್ಲರೇ ಹಣಕ್ಕೆ ಹೋಲಿಸಿದ್ದಾರೆ.

ನೋಟ್ಯಂತರ ಅತಿ ದೊಡ್ಡ ತಪ್ಪು ನಿರ್ಧಾರ. ಭಾರತದ ಹಣ ವಿಶ್ವಾದ್ಯಂತ ಮಾನ್ಯತೆ ಪಡೆದಿದೆ, ಬಿಜೆಪಿಯವರು ಇದನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಈಗ ನೋಡಿ ‘ಭಾರತದ ಚಿಲ್ಲರೆ ವಿಶ್ವಸುಂದರಿ’ ಸ್ಥಾನ ಪಡೆದಿದೆ ಎಂದು ಟ್ವೀಟ್ ಮಾಡಿದ್ದಾರೆ. ಛಿಲ್ಲರ್ ಅವರನ್ನು ಹಾಸ್ಯಕ್ಕೆ ಬಳಸಿಕೊಂಡಿರುವ ತರೂರ್ ವಿರುದ್ಧ ಟ್ವಿಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಛೀಮಾರಿ ಹಾಕಿದ್ದಾರೆ.

ಹಣವನ್ನು ಹೆಣ್ಣಿಗೆ ಹೋಲಿಸುವ ನಿಮಗೆ ಪಿಂಪ್ ಎನ್ನುವುದೇ ಸರಿ ಎಂದು ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ನಟ ಅನುಪಮ ಖೇರ್ ಪ್ರತಿಕ್ರಿಯಿಸಿದ್ದು, ನಿಮ್ಮ ಮನಸ್ಥಿತಿ ಈ ಮಟಕ್ಕೆ ಇಳಿಯಿತೇ ಎಂದು ಪ್ರಶ್ನಿಸಿದ್ದಾರೆ. ಇದರಿಂದ ಎಚ್ಚೆತ ತರೂರ ನಾನು ಕೇವಲ ಹಾಸ್ಯಕ್ಕಾಗಿ ಆ ರೀತಿ ಟ್ವೀಟ್ ಮಾಡಿದ್ದೇನೆ, ಹಾಸ್ಯಮನೋಭಾವದಿಂದ ಸ್ವೀಕರಿಸಿ ಎಂದು ಹೇಳಿದ್ದಾರೆ,

ಇನ್ನು ತರೂರ ಟ್ವೀಟ್ ಭಾರತೀಯ ಮಹಿಳೆಗೆ ಮಾಡಿದ ಅವಮಾನ ಎಂದು ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ ಶಶಿ ತರೂರಗೆ ಮಾಹಿತಿ ಕೇಳಿ ಸಮನ್ಸ್ ನೀಡಿದೆ. ಭಾರತದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟದಲ್ಲಿ ಪಸರಿಸಿ, ವಿಶ್ವಸುಂದರಿಯಾಗಿರುವ ಮಾನುಷಿಯವರನ್ನು ಅವಮಾನಿಸಿದ್ದು, ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search