• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಿಶ್ವಸುಂದರಿಗೆ ಅವಮಾನ ಮಾಡಿ ಚಿಲ್ಲರೆತನ ಪ್ರದರ್ಶಿಸಿದ ತರೂರ್

TNN Correspondent Posted On November 20, 2017
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ಸಂಸದ ಶಶಿತರೂರ ಕೇಂದ್ರದಲ್ಲಿರುವ ಬಿಜೆಪಿ ಸರಕಾರದ ನೋಟ್ಯಂತರವನ್ನು ಟೀಕಿಸುವ ಭರದಲ್ಲಿ ವಿಶ್ವಸುಂದರಿಯಾಗಿ ಆಯ್ಕೆಯಾಗಿರುವ ಮಾನುಷಿ ಛಿಲ್ಲರ್ ಅವರನ್ನು ಹೀನಾಯವಾಗಿ ಅವಮಾನ ಮಾಡಿದ್ದಾರೆ. ನೋಟ್ಯಂತರದ ಕುರಿತು ಟ್ವೀಟ್ ಮಾಡಿರುವ ಶಶಿ ತರೂರ ಮಾನುಷಿ ಅವರ ಕುಟುಂಬದ ಹೆಸರು ಛಿಲ್ಲರ್ ಅವರನ್ನು ಚಿಲ್ಲರೇ ಹಣಕ್ಕೆ ಹೋಲಿಸಿದ್ದಾರೆ.

ನೋಟ್ಯಂತರ ಅತಿ ದೊಡ್ಡ ತಪ್ಪು ನಿರ್ಧಾರ. ಭಾರತದ ಹಣ ವಿಶ್ವಾದ್ಯಂತ ಮಾನ್ಯತೆ ಪಡೆದಿದೆ, ಬಿಜೆಪಿಯವರು ಇದನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಈಗ ನೋಡಿ ‘ಭಾರತದ ಚಿಲ್ಲರೆ ವಿಶ್ವಸುಂದರಿ’ ಸ್ಥಾನ ಪಡೆದಿದೆ ಎಂದು ಟ್ವೀಟ್ ಮಾಡಿದ್ದಾರೆ. ಛಿಲ್ಲರ್ ಅವರನ್ನು ಹಾಸ್ಯಕ್ಕೆ ಬಳಸಿಕೊಂಡಿರುವ ತರೂರ್ ವಿರುದ್ಧ ಟ್ವಿಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಛೀಮಾರಿ ಹಾಕಿದ್ದಾರೆ.

ಹಣವನ್ನು ಹೆಣ್ಣಿಗೆ ಹೋಲಿಸುವ ನಿಮಗೆ ಪಿಂಪ್ ಎನ್ನುವುದೇ ಸರಿ ಎಂದು ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ನಟ ಅನುಪಮ ಖೇರ್ ಪ್ರತಿಕ್ರಿಯಿಸಿದ್ದು, ನಿಮ್ಮ ಮನಸ್ಥಿತಿ ಈ ಮಟಕ್ಕೆ ಇಳಿಯಿತೇ ಎಂದು ಪ್ರಶ್ನಿಸಿದ್ದಾರೆ. ಇದರಿಂದ ಎಚ್ಚೆತ ತರೂರ ನಾನು ಕೇವಲ ಹಾಸ್ಯಕ್ಕಾಗಿ ಆ ರೀತಿ ಟ್ವೀಟ್ ಮಾಡಿದ್ದೇನೆ, ಹಾಸ್ಯಮನೋಭಾವದಿಂದ ಸ್ವೀಕರಿಸಿ ಎಂದು ಹೇಳಿದ್ದಾರೆ,

ಇನ್ನು ತರೂರ ಟ್ವೀಟ್ ಭಾರತೀಯ ಮಹಿಳೆಗೆ ಮಾಡಿದ ಅವಮಾನ ಎಂದು ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ ಶಶಿ ತರೂರಗೆ ಮಾಹಿತಿ ಕೇಳಿ ಸಮನ್ಸ್ ನೀಡಿದೆ. ಭಾರತದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟದಲ್ಲಿ ಪಸರಿಸಿ, ವಿಶ್ವಸುಂದರಿಯಾಗಿರುವ ಮಾನುಷಿಯವರನ್ನು ಅವಮಾನಿಸಿದ್ದು, ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search