• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉಗ್ರರ ಸಂಹಾರದಿಂದ ಬದಲಾಗುತ್ತಿದೆ ಕಾಶ್ಮೀರ ಪರಿಸ್ಥಿತಿ

TNN Correspondent Posted On November 20, 2017


  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕೈಗೊಂಡ ಕಾರ್ಯಾಚರಣೆ ಫಲ ನೀಡಿದ್ದು, ಕಾಶ್ಮೀರದಲ್ಲಿ ಭಾರಿ ಬದಲಾವಣೆಯಾಗಿದೆ ಎಂದು 15 ಕಾರ್ಪ್ಸ್ ಲೆಫ್ಟಿನೆಂಟ್ ಜನರಲ್ ಜೆ.ಎಸ್.ಸಿಂಧು ತಿಳಿಸಿದ್ದಾರೆ.

ಶನಿವಾರ ಆರು ಉಗ್ರರನ್ನು ಹತ್ಯೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ವರ್ಷದಲ್ಲಿ ಭದ್ರತಾ ಸಿಬ್ಬಂದಿ ಬರೋಬ್ಬರಿ 190 ಉಗ್ರರನ್ನು ಹತ್ಯೆ ಮಾಡಿದೆ. ಇದು ಕಾಶ್ಮೀರದಲ್ಲಿ ಭಾರಿ ಬದಲಾವಣೆಗೆ ಕಾರಣವಾಗಿದೆ ಎಂದಿದ್ದಾರೆ.

ಈ 190 ಉಗ್ರರಲ್ಲಿ 80 ಉಗ್ರರು ಸ್ಥಳೀಯರಾಗಿದ್ದು, 110 ಉಗ್ರರು ವಿದೇಶಿಯರಾಗಿದ್ದಾರೆ. ಈ ವಿದೇಶಿ ಉಗ್ರರಲ್ಲಿ 66 ಉಗ್ರರನ್ನು ಒಳನುಸುಳುವ ವೇಳೆಯಲ್ಲೇ ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಹತ್ಯೆ ಹಿನ್ನೆಲೆಯಲ್ಲಿ ಸ್ಥಳೀಯರು ಉಗ್ರ ಸಂಘಟನೆ ಸೇರುವುದು ಕಡಿಮೆಯಾಗಿದ್ದು, ಹತ್ಯೆಗೂ ಮುನ್ನ ನೀವು ಪಾಕಿಸ್ತಾನದವರಾ? ಅಥವಾ ಸ್ಥಳೀಯರಾ ಎಂದು ಪ್ರಶ್ನಿಸಲಾಗುತ್ತದೆ. ಪಾಕಿಸ್ತಾನದವರಾದರೆ ಗುಂಡಿಕ್ಕಿ ಹತ್ಯೆ ಮಾಡಲಾಗುತ್ತದೆ. ಸ್ಥಳೀಯರು ಪರಿವರ್ತನೆಯಾಗಿ ಸಾಮಾನ್ಯರಂತೆ ಜೀವನ ಸಾಗಿಸುವುದಾದರೆ ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.

ಮಜಿದ್ ಅರ್ಷಿದ್ ಖಾನ್ ನಂತೆ ಯುವಕರು ಮನಪರಿವರ್ತನೆ ಹೊಂದಬೇಕು. ಎಲ್ಲರಂತೆ ಗೌರವಯುತವಾದ ಜೀವನ ನಡೆಸಬೇಕು. ಉಗ್ರ ಸಂಘಟನೆ ಸೇರಿದರೂ ಶರಣಾಗಿ, ಮತ್ತೆ ಸಾಮಾನ್ಯ ಜೀವನ ನಡೆಸುವುದಾದರೆ ನಾವು ಅಂಥವರನ್ನು ಗೌರವದಿಂದಲೇ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

190 ಉಗ್ರರನ್ನು ಹತ್ಯೆ ಮಾಡಲು ಸಹಕರಿಸಿದ ಭದ್ರತಾ ಸಿಬ್ಬಂದಿ, ಜಮ್ಮು-ಕಾಶ್ಮೀರ ಪೊಲೀಸ್, ರಾಷ್ಟ್ರೀಯ ರೈಫಲ್ಸ್ ಪಡೆಗೆ ಧನ್ಯವಾದ ಸಹ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search