• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಉಗ್ರರ ಸಂಹಾರದಿಂದ ಬದಲಾಗುತ್ತಿದೆ ಕಾಶ್ಮೀರ ಪರಿಸ್ಥಿತಿ

TNN Correspondent Posted On November 20, 2017
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕೈಗೊಂಡ ಕಾರ್ಯಾಚರಣೆ ಫಲ ನೀಡಿದ್ದು, ಕಾಶ್ಮೀರದಲ್ಲಿ ಭಾರಿ ಬದಲಾವಣೆಯಾಗಿದೆ ಎಂದು 15 ಕಾರ್ಪ್ಸ್ ಲೆಫ್ಟಿನೆಂಟ್ ಜನರಲ್ ಜೆ.ಎಸ್.ಸಿಂಧು ತಿಳಿಸಿದ್ದಾರೆ.

ಶನಿವಾರ ಆರು ಉಗ್ರರನ್ನು ಹತ್ಯೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ವರ್ಷದಲ್ಲಿ ಭದ್ರತಾ ಸಿಬ್ಬಂದಿ ಬರೋಬ್ಬರಿ 190 ಉಗ್ರರನ್ನು ಹತ್ಯೆ ಮಾಡಿದೆ. ಇದು ಕಾಶ್ಮೀರದಲ್ಲಿ ಭಾರಿ ಬದಲಾವಣೆಗೆ ಕಾರಣವಾಗಿದೆ ಎಂದಿದ್ದಾರೆ.

ಈ 190 ಉಗ್ರರಲ್ಲಿ 80 ಉಗ್ರರು ಸ್ಥಳೀಯರಾಗಿದ್ದು, 110 ಉಗ್ರರು ವಿದೇಶಿಯರಾಗಿದ್ದಾರೆ. ಈ ವಿದೇಶಿ ಉಗ್ರರಲ್ಲಿ 66 ಉಗ್ರರನ್ನು ಒಳನುಸುಳುವ ವೇಳೆಯಲ್ಲೇ ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಹತ್ಯೆ ಹಿನ್ನೆಲೆಯಲ್ಲಿ ಸ್ಥಳೀಯರು ಉಗ್ರ ಸಂಘಟನೆ ಸೇರುವುದು ಕಡಿಮೆಯಾಗಿದ್ದು, ಹತ್ಯೆಗೂ ಮುನ್ನ ನೀವು ಪಾಕಿಸ್ತಾನದವರಾ? ಅಥವಾ ಸ್ಥಳೀಯರಾ ಎಂದು ಪ್ರಶ್ನಿಸಲಾಗುತ್ತದೆ. ಪಾಕಿಸ್ತಾನದವರಾದರೆ ಗುಂಡಿಕ್ಕಿ ಹತ್ಯೆ ಮಾಡಲಾಗುತ್ತದೆ. ಸ್ಥಳೀಯರು ಪರಿವರ್ತನೆಯಾಗಿ ಸಾಮಾನ್ಯರಂತೆ ಜೀವನ ಸಾಗಿಸುವುದಾದರೆ ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.

ಮಜಿದ್ ಅರ್ಷಿದ್ ಖಾನ್ ನಂತೆ ಯುವಕರು ಮನಪರಿವರ್ತನೆ ಹೊಂದಬೇಕು. ಎಲ್ಲರಂತೆ ಗೌರವಯುತವಾದ ಜೀವನ ನಡೆಸಬೇಕು. ಉಗ್ರ ಸಂಘಟನೆ ಸೇರಿದರೂ ಶರಣಾಗಿ, ಮತ್ತೆ ಸಾಮಾನ್ಯ ಜೀವನ ನಡೆಸುವುದಾದರೆ ನಾವು ಅಂಥವರನ್ನು ಗೌರವದಿಂದಲೇ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

190 ಉಗ್ರರನ್ನು ಹತ್ಯೆ ಮಾಡಲು ಸಹಕರಿಸಿದ ಭದ್ರತಾ ಸಿಬ್ಬಂದಿ, ಜಮ್ಮು-ಕಾಶ್ಮೀರ ಪೊಲೀಸ್, ರಾಷ್ಟ್ರೀಯ ರೈಫಲ್ಸ್ ಪಡೆಗೆ ಧನ್ಯವಾದ ಸಹ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search