• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉಗ್ರರ ಸಂಹಾರದಿಂದ ಬದಲಾಗುತ್ತಿದೆ ಕಾಶ್ಮೀರ ಪರಿಸ್ಥಿತಿ

TNN Correspondent Posted On November 20, 2017


  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕೈಗೊಂಡ ಕಾರ್ಯಾಚರಣೆ ಫಲ ನೀಡಿದ್ದು, ಕಾಶ್ಮೀರದಲ್ಲಿ ಭಾರಿ ಬದಲಾವಣೆಯಾಗಿದೆ ಎಂದು 15 ಕಾರ್ಪ್ಸ್ ಲೆಫ್ಟಿನೆಂಟ್ ಜನರಲ್ ಜೆ.ಎಸ್.ಸಿಂಧು ತಿಳಿಸಿದ್ದಾರೆ.

ಶನಿವಾರ ಆರು ಉಗ್ರರನ್ನು ಹತ್ಯೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ವರ್ಷದಲ್ಲಿ ಭದ್ರತಾ ಸಿಬ್ಬಂದಿ ಬರೋಬ್ಬರಿ 190 ಉಗ್ರರನ್ನು ಹತ್ಯೆ ಮಾಡಿದೆ. ಇದು ಕಾಶ್ಮೀರದಲ್ಲಿ ಭಾರಿ ಬದಲಾವಣೆಗೆ ಕಾರಣವಾಗಿದೆ ಎಂದಿದ್ದಾರೆ.

ಈ 190 ಉಗ್ರರಲ್ಲಿ 80 ಉಗ್ರರು ಸ್ಥಳೀಯರಾಗಿದ್ದು, 110 ಉಗ್ರರು ವಿದೇಶಿಯರಾಗಿದ್ದಾರೆ. ಈ ವಿದೇಶಿ ಉಗ್ರರಲ್ಲಿ 66 ಉಗ್ರರನ್ನು ಒಳನುಸುಳುವ ವೇಳೆಯಲ್ಲೇ ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಹತ್ಯೆ ಹಿನ್ನೆಲೆಯಲ್ಲಿ ಸ್ಥಳೀಯರು ಉಗ್ರ ಸಂಘಟನೆ ಸೇರುವುದು ಕಡಿಮೆಯಾಗಿದ್ದು, ಹತ್ಯೆಗೂ ಮುನ್ನ ನೀವು ಪಾಕಿಸ್ತಾನದವರಾ? ಅಥವಾ ಸ್ಥಳೀಯರಾ ಎಂದು ಪ್ರಶ್ನಿಸಲಾಗುತ್ತದೆ. ಪಾಕಿಸ್ತಾನದವರಾದರೆ ಗುಂಡಿಕ್ಕಿ ಹತ್ಯೆ ಮಾಡಲಾಗುತ್ತದೆ. ಸ್ಥಳೀಯರು ಪರಿವರ್ತನೆಯಾಗಿ ಸಾಮಾನ್ಯರಂತೆ ಜೀವನ ಸಾಗಿಸುವುದಾದರೆ ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.

ಮಜಿದ್ ಅರ್ಷಿದ್ ಖಾನ್ ನಂತೆ ಯುವಕರು ಮನಪರಿವರ್ತನೆ ಹೊಂದಬೇಕು. ಎಲ್ಲರಂತೆ ಗೌರವಯುತವಾದ ಜೀವನ ನಡೆಸಬೇಕು. ಉಗ್ರ ಸಂಘಟನೆ ಸೇರಿದರೂ ಶರಣಾಗಿ, ಮತ್ತೆ ಸಾಮಾನ್ಯ ಜೀವನ ನಡೆಸುವುದಾದರೆ ನಾವು ಅಂಥವರನ್ನು ಗೌರವದಿಂದಲೇ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

190 ಉಗ್ರರನ್ನು ಹತ್ಯೆ ಮಾಡಲು ಸಹಕರಿಸಿದ ಭದ್ರತಾ ಸಿಬ್ಬಂದಿ, ಜಮ್ಮು-ಕಾಶ್ಮೀರ ಪೊಲೀಸ್, ರಾಷ್ಟ್ರೀಯ ರೈಫಲ್ಸ್ ಪಡೆಗೆ ಧನ್ಯವಾದ ಸಹ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 4
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 5
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search