• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಉಗ್ರರ ಸಂಹಾರದಿಂದ ಬದಲಾಗುತ್ತಿದೆ ಕಾಶ್ಮೀರ ಪರಿಸ್ಥಿತಿ

TNN Correspondent Posted On November 20, 2017
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕೈಗೊಂಡ ಕಾರ್ಯಾಚರಣೆ ಫಲ ನೀಡಿದ್ದು, ಕಾಶ್ಮೀರದಲ್ಲಿ ಭಾರಿ ಬದಲಾವಣೆಯಾಗಿದೆ ಎಂದು 15 ಕಾರ್ಪ್ಸ್ ಲೆಫ್ಟಿನೆಂಟ್ ಜನರಲ್ ಜೆ.ಎಸ್.ಸಿಂಧು ತಿಳಿಸಿದ್ದಾರೆ.

ಶನಿವಾರ ಆರು ಉಗ್ರರನ್ನು ಹತ್ಯೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ವರ್ಷದಲ್ಲಿ ಭದ್ರತಾ ಸಿಬ್ಬಂದಿ ಬರೋಬ್ಬರಿ 190 ಉಗ್ರರನ್ನು ಹತ್ಯೆ ಮಾಡಿದೆ. ಇದು ಕಾಶ್ಮೀರದಲ್ಲಿ ಭಾರಿ ಬದಲಾವಣೆಗೆ ಕಾರಣವಾಗಿದೆ ಎಂದಿದ್ದಾರೆ.

ಈ 190 ಉಗ್ರರಲ್ಲಿ 80 ಉಗ್ರರು ಸ್ಥಳೀಯರಾಗಿದ್ದು, 110 ಉಗ್ರರು ವಿದೇಶಿಯರಾಗಿದ್ದಾರೆ. ಈ ವಿದೇಶಿ ಉಗ್ರರಲ್ಲಿ 66 ಉಗ್ರರನ್ನು ಒಳನುಸುಳುವ ವೇಳೆಯಲ್ಲೇ ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಹತ್ಯೆ ಹಿನ್ನೆಲೆಯಲ್ಲಿ ಸ್ಥಳೀಯರು ಉಗ್ರ ಸಂಘಟನೆ ಸೇರುವುದು ಕಡಿಮೆಯಾಗಿದ್ದು, ಹತ್ಯೆಗೂ ಮುನ್ನ ನೀವು ಪಾಕಿಸ್ತಾನದವರಾ? ಅಥವಾ ಸ್ಥಳೀಯರಾ ಎಂದು ಪ್ರಶ್ನಿಸಲಾಗುತ್ತದೆ. ಪಾಕಿಸ್ತಾನದವರಾದರೆ ಗುಂಡಿಕ್ಕಿ ಹತ್ಯೆ ಮಾಡಲಾಗುತ್ತದೆ. ಸ್ಥಳೀಯರು ಪರಿವರ್ತನೆಯಾಗಿ ಸಾಮಾನ್ಯರಂತೆ ಜೀವನ ಸಾಗಿಸುವುದಾದರೆ ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.

ಮಜಿದ್ ಅರ್ಷಿದ್ ಖಾನ್ ನಂತೆ ಯುವಕರು ಮನಪರಿವರ್ತನೆ ಹೊಂದಬೇಕು. ಎಲ್ಲರಂತೆ ಗೌರವಯುತವಾದ ಜೀವನ ನಡೆಸಬೇಕು. ಉಗ್ರ ಸಂಘಟನೆ ಸೇರಿದರೂ ಶರಣಾಗಿ, ಮತ್ತೆ ಸಾಮಾನ್ಯ ಜೀವನ ನಡೆಸುವುದಾದರೆ ನಾವು ಅಂಥವರನ್ನು ಗೌರವದಿಂದಲೇ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

190 ಉಗ್ರರನ್ನು ಹತ್ಯೆ ಮಾಡಲು ಸಹಕರಿಸಿದ ಭದ್ರತಾ ಸಿಬ್ಬಂದಿ, ಜಮ್ಮು-ಕಾಶ್ಮೀರ ಪೊಲೀಸ್, ರಾಷ್ಟ್ರೀಯ ರೈಫಲ್ಸ್ ಪಡೆಗೆ ಧನ್ಯವಾದ ಸಹ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search