• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಒಂದಾದ ಬೆನ್ನಲ್ಲೇ ಬಿರುಕು, ಹಾರ್ದಿಕ್ ಪಟೇಲ್ ಪಿಎಎಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ

TNN Correspondent Posted On November 20, 2017


  • Share On Facebook
  • Tweet It

ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿ ಮುಖ್ಯಸ್ಥ ಹಾರ್ದಿಕ್ ಪಟೇಲ್ ಹಾಗೂ ಕಾಂಗ್ರೆಸ್ ಒಂದಾದ ಬೆನ್ನಲ್ಲೇ ಇಬ್ಬರ ನಡುವೆ ಜಟಾಪಟಿ ಆರಂಭವಾಗಿದ್ದು, ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಎರಡು ಬಣಗಳ ನಡುವೆ ಸೂರತ್ ನಲ್ಲಿ ಗಲಾಟೆ ನಡೆದಿದೆ.

ಕಾಂಗ್ರೆಸ್ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಪಿಎಎಎಸ್ ನ ಇಬ್ಬರ ಹೆಸರನ್ನು ಪಟ್ಟಿಯಲ್ಲಿ ಸೇರಿಸಿದೆ. ಆದರೆ ಬಿಡುಗಡೆಗೂ ಮುನ್ನ ಕಾಂಗ್ರೆಸ್ ಐವರಿಗೆ ಟಿಕೆಟ್ ನೀಡುವುದಾಗಿ ತಿಳಿಸಿ, ಈಗ ಇಬ್ಬರಿಗೆ ನೀಡಿದೆ ಎಂದು ಪಿಎಎಎಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ವೇಳೆ ಎರಡೂ ಬಣಗಳ ಕಾರ್ಯಕರ್ತರ ನಡುವೆ ವಾಗ್ವಾದ ಜೋರಾಗಿದ್ದು, ಕಾರ್ಯಕರ್ತರು ಕೈ ಕೈ ಮಿಲಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ಏತನ್ಮಧ್ಯೆ, ಪಿಎಎಎಸ್ ಕೋರ್ ಕಮಿಟಿ ಜತೆ ಚರ್ಚಿಸದೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದೆ ಎಂದು ಪಿಎಎಎಸ್ ಸಂಚಾಲಕ ದಿನೇಶ್ ಬಂಭಾನಿಯಾ ಆರೋಪಿಸಿದ್ದಾರೆ.

ಕಾಂಗ್ರೆಸ್ ಭಾನುವಾರ ರಾತ್ರಿ 77 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದೆ. ಡಿ.8 ಹಾಗೂ 14ರಂದು ಗುಜರಾತಿನಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಆದರೆ, ಚುನಾವಣೆಗೂ ಮೊದಲೇ ಪಿಎಎಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಟಿಕೆಟ್ ಹಂಚಿಕೆ ವಿಚಾರದಲ್ಲೇ ಜಗಳವಾಡಿದ್ದು, ಅಧಿಕಾರಕ್ಕೆ ಬಂದರೆ ಹೇಗೆ ವರ್ತಿಸುತ್ತಾರೆ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ.

  • Share On Facebook
  • Tweet It


- Advertisement -


Trending Now
#ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
Tulunadu News December 2, 2023
ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
Tulunadu News December 2, 2023
Leave A Reply

  • Recent Posts

    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
    • ಪಂಚಾಯತ್ ಮೂಲಕ ಅಂಗಡಿ ಪಡೆದಿದ್ದ ಆತ!
    • ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!
    • ಇನ್ನೊಬ್ಬ ಉಗ್ರ ಸಿದ್ದೀಕ್ ಅನಾಮಧೇಯ ಶೂಟರ್ ಗಳಿಂದ ಹತ್ಯೆ!
    • ಮಿಸ್ ಪಾಂಡಿಚೇರಿ ಈಗ ಮಿಸ್ ಆಫ್ರಿಕಾ ಗೋಲ್ಡನ್ ಸ್ಪರ್ಧೆಗೆ ರೆಡಿ!
  • Popular Posts

    • 1
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • 2
      ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • 3
      ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • 4
      ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • 5
      ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search