• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಕಲ್ಲು ತೂರಾಟಗಾರರಿಂದ ಗಾಯಗೊಂಡವರಿಗೆ ನೌಕರಿ ನೀಡಲು ಮುಂದಾದ ರಾಜ್ಯ ಸರ್ಕಾರ!

TNN Correspondent Posted On November 20, 2017
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗುತ್ತಿದೆ ಎಂದು ಭದ್ರತಾ ಸಿಬ್ಬಂದಿ ಹಿರಿಯ ಅಧಿಕಾರಿಗಳು ಹೇಳಿರುವ ಬೆನ್ನಲ್ಲೇ ರಾಜ್ಯ ಸರಕಾರ ದಿಟ್ಟ ನಿರ್ಧಾರವೊಂದು ಕೈಗೊಂಡಿದ್ದು, ಕಲ್ಲು ತೂರಾಟಗಾರರಿಂದ ಗಾಯಗೊಂಡವರಿಗೆ ಸರಕಾರಿ ನೌಕರಿ ನೀಡಲು ಮುಂದಾಗಿದೆ.

ರಾಜ್ಯ ಮಾನವ ಹಕ್ಕುಗಳ ಆಯೋಗದ ವರದಿ ಪ್ರಕಾರ, 2016ರ ಜುಲೈ 8ರಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ವನಿ ಹತ್ಯೆಯಾದ ಬಳಿಕ ಕಲ್ಲು ತೂರಾಟಗಾರರ ಏಟಿಗೆ 2,524 ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದರಲ್ಲಿ 59 ಮಹಿಳೆಯರು ಸೇರಿ 1,725 ಸಂತ್ರಸ್ತರ ಪಟ್ಟಿಯನ್ನು ಸರ್ಕಾರ ಪರಿಷ್ಕರಿಸಿ ಆಯೋಗಕ್ಕೆ ನೀಡಿದ್ದು, ಇವರಲ್ಲಿ ಕಣ್ಣು ಕಳೆದುಕೊಂಡವರು ಅಥವಾ ಭಾಗಶಃ ಅಂಗವಿಕಲರಾದವರಿಗೆ ಸರ್ಕಾರಿ ನೌಕರಿ ನೀಡುವುದಾಗಿ ತಿಳಿಸಿದೆ.

ಅಲ್ಲದೆ, ಇವರಲ್ಲಿ ಸಂಪೂರ್ಣವಾಗಿ ಕಣ್ಣು ಕಳೆದುಕೊಂಡ 12 ಸಂತ್ರಸ್ತರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ತೀವ್ರ ಗಾಯಗೊಂಡವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ಧನ ಸಹ ಸರಕಾರ ಘೋಷಣೆ ಮಾಡಿದೆ.

ಶೋಪಿಯಾನ್, ಕುಲ್ಗಾಮ್ ಸೇರಿ ಕಲ್ಲು ತೂರಾಟ ಪ್ರಕರಣ ಜಾಸ್ತಿ ನಡೆಯುವ ಕಾಶ್ಮೀರದ ಹತ್ತು ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿ ಅಂಕಿ-ಅಂಶ ಕಲೆಹಾಕಲಾಗಿದೆ. ಬಂಡಿಪೋರಾ ಮತ್ತು ಬುದ್ಗಾಮ್ ಜಿಲ್ಲೆಗಳ ಅಂಕಿ-ಅಂಶ ಪಡೆಯುವುದು ಬಾಕಿ ಇದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ನಿವೃತ್ತ ನ್ಯಾಯಮೂರ್ತಿ ಬಿಲಾಲ್ ನಜ್ಕಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search