• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಕಲ್ಲು ತೂರಾಟಗಾರರಿಂದ ಗಾಯಗೊಂಡವರಿಗೆ ನೌಕರಿ ನೀಡಲು ಮುಂದಾದ ರಾಜ್ಯ ಸರ್ಕಾರ!

TNN Correspondent Posted On November 20, 2017
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗುತ್ತಿದೆ ಎಂದು ಭದ್ರತಾ ಸಿಬ್ಬಂದಿ ಹಿರಿಯ ಅಧಿಕಾರಿಗಳು ಹೇಳಿರುವ ಬೆನ್ನಲ್ಲೇ ರಾಜ್ಯ ಸರಕಾರ ದಿಟ್ಟ ನಿರ್ಧಾರವೊಂದು ಕೈಗೊಂಡಿದ್ದು, ಕಲ್ಲು ತೂರಾಟಗಾರರಿಂದ ಗಾಯಗೊಂಡವರಿಗೆ ಸರಕಾರಿ ನೌಕರಿ ನೀಡಲು ಮುಂದಾಗಿದೆ.

ರಾಜ್ಯ ಮಾನವ ಹಕ್ಕುಗಳ ಆಯೋಗದ ವರದಿ ಪ್ರಕಾರ, 2016ರ ಜುಲೈ 8ರಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ವನಿ ಹತ್ಯೆಯಾದ ಬಳಿಕ ಕಲ್ಲು ತೂರಾಟಗಾರರ ಏಟಿಗೆ 2,524 ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದರಲ್ಲಿ 59 ಮಹಿಳೆಯರು ಸೇರಿ 1,725 ಸಂತ್ರಸ್ತರ ಪಟ್ಟಿಯನ್ನು ಸರ್ಕಾರ ಪರಿಷ್ಕರಿಸಿ ಆಯೋಗಕ್ಕೆ ನೀಡಿದ್ದು, ಇವರಲ್ಲಿ ಕಣ್ಣು ಕಳೆದುಕೊಂಡವರು ಅಥವಾ ಭಾಗಶಃ ಅಂಗವಿಕಲರಾದವರಿಗೆ ಸರ್ಕಾರಿ ನೌಕರಿ ನೀಡುವುದಾಗಿ ತಿಳಿಸಿದೆ.

ಅಲ್ಲದೆ, ಇವರಲ್ಲಿ ಸಂಪೂರ್ಣವಾಗಿ ಕಣ್ಣು ಕಳೆದುಕೊಂಡ 12 ಸಂತ್ರಸ್ತರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ತೀವ್ರ ಗಾಯಗೊಂಡವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ಧನ ಸಹ ಸರಕಾರ ಘೋಷಣೆ ಮಾಡಿದೆ.

ಶೋಪಿಯಾನ್, ಕುಲ್ಗಾಮ್ ಸೇರಿ ಕಲ್ಲು ತೂರಾಟ ಪ್ರಕರಣ ಜಾಸ್ತಿ ನಡೆಯುವ ಕಾಶ್ಮೀರದ ಹತ್ತು ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿ ಅಂಕಿ-ಅಂಶ ಕಲೆಹಾಕಲಾಗಿದೆ. ಬಂಡಿಪೋರಾ ಮತ್ತು ಬುದ್ಗಾಮ್ ಜಿಲ್ಲೆಗಳ ಅಂಕಿ-ಅಂಶ ಪಡೆಯುವುದು ಬಾಕಿ ಇದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ನಿವೃತ್ತ ನ್ಯಾಯಮೂರ್ತಿ ಬಿಲಾಲ್ ನಜ್ಕಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search